32 C
Mumbai
March 7, 2026
Mumbai News Kannada
ಮುಂಬಯಿ

ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜ್ ಐರೋಲಿ: ವಿದ್ಯಾರ್ಥಿಗಳಿಗೆ  ಲೀಡರ್ಶಿಪ್ ಬಗ್ಗೆ ಉಪನ್ಯಾಸ. 





   ಮುಂಬಯಿ ಜುಂ 21.    ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜ್ ಐರೋಲಿ ಯಲ್ಲಿ ವಿದ್ಯಾರ್ಥಿಗಳಿಗೆ Pathway to Leadership Excellence ಎಂಬ ವಿಷಯದ ಮೇಲೆ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು.  ಖ್ಯಾತ ಉಪನ್ಯಾಸಕ ಡಾ. ಸುನಿಲ್ ರಾಜ್ ವಿದ್ಯಾರ್ಥಿಗಳಿಗೆ ಲೀಡರ್ಶಿಪ್ ಗೆ ಬೇಕಾದ ಗುಣಗಳ ಬಗ್ಗೆ ತಿಳಿ ಹೇಳಿದರು. ಹಲವಾರು ಮ್ಯಾನೇಜ್ಮೆಂಟ್ ಗುರುಗಳನ್ನು ಹೆಸರಿಸುತ್ತಾ ಅವರು ಮ್ಯಾನೇಜ್ಮೆಂಟ್ ಬಗ್ಗೆ ಕೊಟ್ಟ  ವ್ಯಾಖ್ಯಾನವನ್ನು ವಿವರಿಸಿದರು.

     ಒಳ್ಳೆಯ ಹಾಗು ಸಫಲ ನಾಯಕನಾಗುವ ಸಲುವಾಗಿ ಅಪಾರ ಪರಿಶ್ರಮ ಪಡಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಸಿದರು. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಸಾಧನೆಯನ್ನು ಮೇಲಕುಹಾಕುತ್ತಾ ವಿದ್ಯಾರ್ಥಿಗಳು ಪರಿಶ್ರಮದಿಂದ ಯಶಸ್ಸನ್ನು ಪಡೆಯಬೇಕೆಂದು ತಿಳಿಸಿದರು. ನಾವು ತೆಗೆದುಕೊಳ್ಳುವ ತೀರ್ಮಾನ, ಮುಂದಾಲೋಚನೆ, ಪರೋಪಕಾರ, ಸತತ ಪರಿಶ್ರಮ ದಿಂದ ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳಬೇಕೆಂದು ಸುನಿಲ್ ರಾಜ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮ  ಸರಸ್ವತಿ ಪೂಜೆ ಹಾಗು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. IQAC ಸಂಚಾಲಕಿ  ಸಿಂಧು ರಮಣಿ ಅತಿಥಿಗಳನ್ನು,ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು, ಪ್ರಾಧ್ಯಾಪಕ ವೃಂದ ಹಾಗು ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.  ಮುಖ್ಯ ಅತಿಥಿ ಸುನಿಲ್ ರಾಜ್ ರನ್ನು ಜ್ಞಾನ ವಿಕಾಸ ಮಂಡಲದ ಕಾರ್ಯಾಧ್ಯಕ್ಷ  ಕೆ. ಎಚ್. ದೇಶಪಾಂಡೆ ಅವರು ಹೂಗುಚ್, ಶಾಲು ಹಾಗು ನೆನಪಿನ ಕಾಣಿಕೆ ಸಲ್ಲಿಸಿ ಸನ್ಮಾನಿಸಿದರು. ಮುಂಬೈ ಠಾಣೆ ಸ್ಟೂಡೆಂಟ್ಸ್ ವೆಂಚುವರ್ ಸಂಸ್ಥೆಯ ಪ್ರಮುಖ  ಪ್ರಿನ್ಸ್ ಜೋಶೆಫ, ಡಾ.ವಂದನಾ,  ಅನಿತಾ ಪ್ರಿನ್ಸ್ ಅವರನ್ನು ಹೂಗುಚ್ಛ ಸಲ್ಲಿಸಿ ಸ್ವಾಗತಿಸಲಾಯಿತು. ಪ್ರಾಚಾರ್ಯ ಡಾ. ಬಿ ಆರ್.ದೇಶಪಾಂಡೆ ಇವರು  ಕಾರ್ಯಾಧ್ಯಕ್ಷ  ಕೆ. ಎಚ್.ದೇಶಪಾಂಡೆ ಹಾಗು ಜೊತೆ ಪ್ರದಾನ ಕಾರ್ಯದರ್ಶಿ  ಜಾನ್ ಥಾಮಸ್ ಅವರನ್ನು ಹೂಗುಚ್ಛ ಸಲ್ಲಿಸಿ ಸ್ವಾಗತಿಸಿದರು.  ಅಧ್ಯಕ್ಷತೆ ವಹಿಸಿ ಮಾತನಾಡಿದ  ಕೆ ಎಚ್ಚ.ದೇಶಪಾಂಡೆ ಅವರು  ವಿದ್ಯಾರ್ಥಿಗಳು ನಾಯಕನಾಗಲು ಬೇಕಾದ ವ್ಯಕ್ತಿತ್ವವನ್ನು ಪಡೆಯಬೇಕೆಂದು ತಿಳಿಸಿದರು. ಒಳ್ಳೆಯ ಶಿಕ್ಷಣ ಪಡೆದು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರಬೇಕೆಂದು ತಿಳಿಸಿದರು.   ಜ್ಞಾನ ವಿಕಾಸ ಮಂಡಲದ ಆಡಳಿತ ಮಂಡಳಿಯ ಸದಸ್ಯ ಶ್ರೀ ಸತೀಶ ಕಿಲಾರಿ ಅವರು ಉಪಸ್ಥಿತರಿದ್ದರು. ಪ್ರಾಧ್ಯಾಪಕ ಸಾಗರ  ಶಿಂದೆ ವಂದನಾರ್ಪಣೆ ಸಲ್ಲಿಸಿದರು.



Related posts

ವರ್ಲಿ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿಬೀಡು ಪೌಂಡೇಶನ್,30ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ, ಭಕ್ತಿ, ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಅರವಿಂದ್ ಪದ್ಮಶಾಲಿ ಗೆ ಶೇ 96 ಅಂಕ.

Mumbai News Desk

ಕರ್ನಾಟಕ ಸಂಘ ಮುಂಬಯಿ, ಡಾ.ಸುನೀತಾ ಶೆಟ್ಟಿ ಸಾಹಿತ್ಯ ಪ್ರಶಸ್ತಿ ಪ್ರಧಾನ ಮತ್ತು ಕೃತಿ ಬಿಡುಗಡೆ ಸಮಾರಂಭ

Mumbai News Desk

ಮುಂಬೈ: ಐದು ವರ್ಷದ ಮಗುವನ್ನು ಅಪಹರಿಸಿ, 6 ಲಕ್ಷ ರೂ.ಗೆ ಮಾರಾಟ : ವೈದ್ಯರ ಮನೆಯಿಂದ ಮಗುವಿನ ರಕ್ಷಣೆ

Mumbai News Desk

ಮೀರಾರೋಡಿನಲ್ಲಿ ಗೆಜ್ಜೆ ಗಿರಿ ಮೇಳದವರಿಂದ……ಎಡ್ಮೂರ ಮುಗೇರ ಸತ್ಯೊಲು…ಯಕ್ಷಗಾನ ಪ್ರದರ್ಶನ.

Mumbai News Desk