September 6, 2026
Mumbai News Kannada
ಮುಂಬಯಿ

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ





ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಆಡಳಿತ ಮಂಡಳಿ ಮತ್ತು ಉಪಸಮಿತಿಗಳ ಸಹಕಾರದೊಂದಿಗೆ ಧಾರ್ಮಿಕ ಸಮಿತಿಯ ಸಂಯೋಜನೆಯಲ್ಲಿ ಜುಲೈ 21 ರಂದು ರವಿವಾರ ಅಪರಾಹ್ನ 3-00 ರಿಂದ ಥಾಣೆ ಪಶ್ಚಿಮದಲ್ಲಿರುವ ಸಂಘದ ನೂತನ ಕಿರು ಸಭಾಂಗಣದಲ್ಲಿ (ಪ್ರಥಮ ಮಹಡಿ, 9 ಮಾನಸಿ) ಗುರುಪೂರ್ಣಿಮೆ ಆಚರಿಸಲಾಯಿತು
ಅಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿದ ಬಳಿಕ ಬ್ರಹ್ಮಶ್ರೀ ನಾರಾಯಣಗುರು ಭಜನಾ ಮಂಡಳಿ ಮತ್ತು ಸದಸ್ಯರಿಂದ ಭಜನೆ ನಡೆಯಿತು ತದನಂತರ ಧಾರ್ಮಿಕ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಪ್ರಧಾನ ಅರ್ಚಕರಾದ ಶ್ರೀಧರ ವಿ. ಪೂಜಾರಿ ಮಹಾಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದ ವಿತರಿಸಿದರು. ಮಾಜಿ ಉಪಾಧ್ಯಕ್ಷರಾದ ಸಿ. ಎ. ಪೂಜಾರಿ ಗುರು ಸೋತ್ರ ಪಠಿಸಿ ಪ್ರಾರ್ಥನೆ ಸಲ್ಲಿಸಿದರು.
ಈ ಗುರು ಪೂರ್ಣಿಮೆ ಉತ್ಸವದಲ್ಲಿ ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ, ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್ ಉಪಾಧ್ಯಕ್ಷರುಗಳಾದ ಎನ್. ಎಮ್. ಬಿಲ್ಲವ, ಆನಂದ ಕೆ. ಪೂಜಾರಿ, ಮಾಜಿ ಉಪಾಧ್ಯಕ್ಷರಾದ ಎನ್. ಜಿ. ಪೂಜಾರಿ, ಜೊತೆ ಕಾರ್ಯದರ್ಶಿ ಹರೀಶ್ ಎನ್. ಪೂಜಾರಿ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಮಲ್ಲಿಕಾ ಎಸ್. ಪೂಜಾರಿ, ಧಾರ್ಮಿಕ ಸಮಿತಿಯ ಜೊತೆ ಕಾರ್ಯದರ್ಶಿ ಸೋಮಯ್ಯ ಪೂಜಾರಿ ಹಾಗೂ ಆಡಳಿತ ಮಂಡಳಿ ಮತ್ತು ಉಪಸಮಿತಿಗಳ ಸದಸ್ಯರು, ಸಮಾಜ ಬಾಂಧವರು ಸಂಘದ ಸದಸ್ಯರು ಮತ್ತು ಹಿತಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಬ್ರಹ್ಮಶ್ರೀ ನಾರಾಯಣ ಗುರುವರ್ಯರಗೆ ಗುರುವಂದನೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು.



Related posts

ಗೋರೆಗಾಂವ್ ಕರ್ನಾಟಕ ಸಂಘದ 66ನೇ ಸಂಸ್ಥಾಪನಾ ದಿನಾಚರಣೆ.

Mumbai News Desk

ಮೀರಾರೋಡ್ ನಲ್ಲಿ ಕೀರ್ತಿಶ್ರೀ ಭಾಸ್ಕರ್ ಮೂಲ್ಯ ಅವರ ಶ್ರೀ ಕಟೀಲೇಶ್ವರಿ ನಾಟ್ಯ ಕಲಾ ಮಂದಿರದ 2ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಮಹಿಳಾ ವಿಭಾಗದಿಂದ ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ ಹಾಗೂ ಮಲಾಡ್ ಬಿಲ್ಲವಾಸ್ ಮಹಿಳಾ ವಿಭಾಗದಿಂದ ಅರಸಿನ–ಕುಂಕುಮ ಕಾರ್ಯಕ್ರಮ,

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ ಸಂಪನ್ನ

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ .

Mumbai News Desk