28.4 C
Mumbai
March 7, 2026
Mumbai News Kannada
ತುಳುನಾಡು

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.





ಉಡುಪಿ,ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 21ರಂದು, ಗುರು ಭಕ್ತರ, ಉಪಸ್ಥಿತಿಯಲ್ಲಿ ಭಕ್ತಿ, ಶ್ರದ್ದೆಯಿಂದ,ವಿಜೃಂಭಣೆಯಿಂದ ಜರಗಿತು.
ಅಂದು ಬೆಳ್ಳಿಗೆ 5 ಗಂಟೆಗೆ ಕಾಕಡ ಆರತಿ ಬೆಳಗಳಾಯಿತು.
ನಂತರ ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ ನಡೆಯಿತು.
ಮಧ್ಯಾಹ್ನ 12 ಗಂಟೆಗೆ ಶ್ರೀ ನಿತ್ಯಾನಂದ ಸ್ವಾಮಿಗೆ ಮಹಾಪೂಜೆ ನಡೆಯಿತು. ಮಹಾಪೂಜೆಯ ಬಳಿಕ ಬಾಲಾಭೋಜನ ಮತ್ತು ಅನ್ನಸಂತರ್ಪಣೆ ಆರಂಭವಾಯಿತು.


ತಡ ಸಂಜೆ ಪಲ್ಲಕ್ಕಿ ಉತ್ಸವ, ಮಹಾಪೂಜೆಯಾಗಿ ಸೇರಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಗುರು ಪೂರ್ಣಿಮಾ ಮಹೋತ್ಸವದಲ್ಲಿ ಮಂದಿರದ ಆಡಳಿತ ಟ್ರಸ್ಟಿ, ಮುಂಬಯಿಯ ಉದ್ಯಮಿ ಕೆ. ಕೆ ಆವರ್ಸೆಕರ್, ಮಂದಿರ ಮಠದ ಎಕ್ಸಿಕ್ಯೂಟಿವ್ ಟ್ರಸ್ಟಿ ಕೆ ದಿವಾಕರ ಶೆಟ್ಟಿ ತೋಟದಮನೆ, ಕಾರ್ಯದರ್ಶಿ ತೋನ್ಸೆ ನವೀನ್ ಶೆಟ್ಟಿ, ಜಾಯಿಂಟ್ ಎಕ್ಸಿಕ್ಯೂಟಿವ್ ಟ್ರಸ್ಟಿ ಕೆ ಮೋಹನ ಚಂದ್ರ ನಂಬಿಯಾರ್, ಕಾಂಞಂಗಾಡ್‌ ನ ಟ್ರಸ್ಟಿ ಕುಮಾರ್ ಎನ್ ಬಂಗೇರ, ಕೋಶಾಧಿಕಾರಿ ನರಸಿಂಹ ಶೆಣೈ, ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ, ರಮೇಶ್ ಶೆಟ್ಟಿ ಪಾಲ್ಗರ್, ಸಿ ಕೆ ಪಾಟೀಲ್ ಸಿ ಏ ಮುಂಬಯಿ, ಗಣೇಶ್ ಶೆಟ್ಟಿ ಸಿ ಎಸ್, ನ್ಯಾಯವಾದಿ ರವಿ ಕೋಟ್ಯಾನ್ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು, ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕಾರಿ ಸಮಿತಿ ಹಾಗೂ ಸೇವಾ ಸಮಿತಿಯ ಸದಸ್ಯರು ಗುರು ಪೂರ್ಣಿಮಾ ಮಹೋತ್ಸವ ಸಾಂಗವಾಗಿ ನಡೆಯುವಲ್ಲಿ ಶ್ರಮಿಸಿದರು.



Related posts

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು : ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ, ಅ. 29ರ ತನಕ ಸ್ವರ್ಣ ಸಮರ್ಪಣೆಗೆ ಭಕ್ತರಿಗೆ ಅವಕಾಶ

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ ಸಂಭ್ರಮ; ಭಕ್ತಿಪರವಶತೆಯ ಹೊರೆಕಾಣಿಕೆ ಸಮರ್ಪಣೆ

Mumbai News Desk

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Mumbai News Desk

ಮಂಗಳೂರು ಕುಲಾಲ ಭವನ ಉದ್ಘಾಟನೆ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ, ಸಿಎಂ ಆಗಮನಕ್ಕೆ ಮನವಿ

Mumbai News Desk

ತುಳುವೆರೆ ‘ತುಡರ ಪರ್ಬ’: ಬಲಿ ಚಕ್ರವರ್ತಿ ಬೊಕ್ಕ ಬೆನ್ನಿ ಸಂಸ್ಕೃತಿದ ಸಂಗಮ

Mumbai News Desk