July 22, 2026
Mumbai News Kannada
ಸುದ್ದಿ

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.







ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು – ಸುಬ್ರಮಣ್ಯ ನಡುವೆ ರೈಲು ಸಂಚಾರ ಮತ್ತೆ ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒಟ್ಟಾಯಿಸಿದ್ದಾರೆ.
ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಬೇಕು ಎಂದು ಸಂಸದರು ಹೇಳಿದರು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ ಎಂದರು.

ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯೊಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ.
ಸಂಸದರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಚೌಟರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (01/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.

Mumbai News Desk

ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ , ಕಾರ್ಯಕಾರಿ ಸಮಿತಿಗೆ ಬಿ ನಾಗರಾಜ ಆಯ್ಕೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ ಶಶಿಧರ ಶೆಟ್ಟಿ ಬರೋಡಾ ಅವರಿಂದ 1.25 ಕೋಟಿ ರೂ. ದೇಣಿಗೆ: ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ: ವಿಶೇಷ ಸಭೆ

Mumbai News Desk

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Mumbai News Desk

ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ – ಪತ್ರಕರ್ತರಿಗೆ ವಿಶೇಷ ಪ್ರದರ್ಶನ

Mumbai News Desk