30.9 C
Mumbai
June 8, 2026
Mumbai News Kannada
ತುಳುನಾಡು

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ





ಕಾಪು, ಆ. 4: ಆಟಿ ಅಮಾವಾಸ್ಯೆಯ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ರವಿವಾರ ಕಾಪು ಪೇಟೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಹಾಲೆ ಮರದ ತೊಗಟೆಯ ಕಷಾಯವನ್ನು‌ ವಿತರಿಸಲಾಯಿತು.

ಬಿರುವೆರ್ ಕಾಪು ಸೇವಾ ಸಮಿತಿಯ ಸದಸ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಪೂಜಾರಿ ಕೊಂಬಗುಡ್ಡೆ ಅವರ ನೇತೃತ್ವದಲ್ಲಿ ಮುಂಜಾನೆ ಬೆಳಪುವಿನಿಂದ ಸಂಗ್ರಹಿಸಿ ತಂದ ಹಾಲೆ ಮರದ ತೊಗಟೆಯಲ್ಲಿ ಸುಮಾರು 100 ಲೀಟರ್ ಕಷಾಯವನ್ನು ಸಿದ್ಧಪಡಿಸಲಾಗಿದ್ದು, ಅದರ ಜತೆಗೆ ಮೆಂತೆ‌ ಪಾಯಸವನ್ನೂ ಸರ್ವಧರ್ಮೀಯರಿಗೆ ವಿತರಿಸಲಾಯಿತು.

ಬಿರುವೆರ್ ಕಾಪು ಸೇವಾ ಸಮಿತಿ ಗೌರವಾಧ್ಯಕ್ಷ ಭಾಸ್ಕರ್ ಅಂಚನ್, ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್, ಉಪಾಧ್ಯಕ್ಷ ಸುಧಾಕರ್ ಸಾಲ್ಯಾನ್, ಪದಾಧಿಕಾರಿಗಳಾದ ವಿಕ್ಕಿ ಪೂಜಾರಿ ಮಡುಂಬು, ಅತಿಥ್ ಸುವರ್ಣ ಪಾಲಮೆ, ದೀಪಕ್ ಕುಮಾರ್ ಎರ್ಮಾಳು, ಸದಸ್ಯರಾದ ಪ್ರಶಾಂತ್ ಪೂಜಾರಿ, ಸುಜನ್ ಎಲ್. ಸುವರ್ಣ, ಅನಿಲ್‌ ಅಮೀನ್‌ ಕಾಪು, ಅಶ್ವಿನಿ ನವೀನ್, ಸಂಧ್ಯಾ ಬಿ. ಕೋಟ್ಯಾನ್, ಇನ್ನಂಜೆ ಬಿಲ್ಲವ‌ ಸಂಘದ ಮಾಜಿ ಅಧ್ಯಕ್ಷ ಸದಾಶಿವ ಪೂಜಾರಿ, ಸ್ಥಳೀಯರಾದ ಶಿವಾನಂದ ಪೂಜಾರಿ ಮುನ್ನ, ರಮೇಶ್ ಪೂಜಾರಿ‌ ಮಲ್ಲಾರು, ಅಶ್ವಿನಿ ಜಿ. ಕೋಟ್ಯಾನ್, ಸಂದೇಶ್ ಪೂಜಾರಿ, ರವಿ ಪೂಜಾರಿ ಮೊದಲಾದವರು ಸಹಕರಿಸಿದರು.



Related posts

ಮುಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ರಾಜ್ಯ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ ಮನೆಗೆ ಭೇಟಿ: ಗೌರವ ಸಮರ್ಪಣೆ

Mumbai News Desk

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk

ದೊಡ್ಡಣಗುಡ್ಡೆ: ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ

Mumbai News Desk

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.

Mumbai News Desk

ವಿಜ್ಞಾನದಲ್ಲಿ ಪ್ರಯೋಗಶೀಲತೆ ಅತಿ ಮುಖ್ಯ: ಸುರೇಶ್ ಶೆಟ್ಟಿ ನಾಡಿಯಾಳು ಗುತ್ತು

Mumbai News Desk

ಮುಲ್ಕಿ : ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ ಅವರಿಗೆ ಸನ್ಮಾನ

Mumbai News Desk