
ನಾಯ್ಗಾಂವ್- ವಸಯಿ -ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ ವಸಾಯಿ ತಾಲೂಕ ಮೊಗವೀರ ಸಂಘದವತಿಯಿಂದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್ 11ರ ಭಾನುವಾರ,ಸಂಜೆ 4 ಗಂಟಿಗೆ, ವಸಯಿ ಪಶ್ಚಿಮ ಆನಂದ ನಗರ ನ್ಯೂ ವರ್ಷ ಸಂಕಿರ್ಣದ ಕೇಶವ ಕೊರಗಪ್ಪ ಸಾಲಿಯಾನ್ ಸಭಾಗ್ರಹದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಬಂಟರ ಸಂಘ ಮುಂಬೈಯ ವಸಯಿ-ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಎಸ್ ಶೆಟ್ಟಿ, ಮುಂಬಯಿಯ ಉದ್ಯಮಿ, ಸಮಾಜ ಸೇವಕ ಗೋಪಾಲ ಸಾಲಿಯಾನ್ ಆಗಮಿಸಲಿರುವರು.
ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸುಗೊಳಿಸುವಂತೆ ವಸಾಯಿ ತಾಲೂಕ ಮೊಗವೀರ ಸಂಘದ ಅಧ್ಯಕ್ಷ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ದಯಾನಂದ ಕುಂದರ್, ಕಾರ್ಯದರ್ಶಿ ಶೇಖರ ಕರ್ಕೇರ, ಕೋಶಾಧಿಕಾರಿ ವಿಶ್ವನಾಥ ಬಂಗೇರ, ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೆ ಪಲ್ಲವಿ ಪುತ್ರನ್, ಸಲಹೆಗಾರ ಮೋಹಿನಿ ಮಲ್ಪೆ, ಸಂಚಾಲಕ ಪ್ರದೀಪ್ ಪುತ್ರನ್, ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಪ್ರತೀಕ್ ಶ್ರೀಯಾನ್ ಕೇಳಿ ಕೊಂಡಿದ್ದಾರೆ.




