July 23, 2026
Mumbai News Kannada
ತುಳುನಾಡು

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ








ಕಾಪು – ಪೊಲಿಪು : ಕಾಂಚನ್ ಮೂಲಸ್ಥಾನದ ವಾರ್ಷಿಕ ಮಹಾಸಭೆಯು ನಾಗರ ಪಂಚಮಿಯ ಶುಭ ದಿನದಂದು ದಿನಾಂಕ 09.08.24ರಂದು ಕಾಂಚನ್ ಮೂಲಸ್ಥಾನದ ಸಮುದಾಯ ಭವನದಲ್ಲಿ ಅಧ್ಯಕ್ಷರಾದ ಗಣೇಶ್ ಕಾಂಚನ್
ಅವರ ಅಧ್ಯಕ್ಷತೆಯಲ್ಲಿ ಜರಗಿತು.
ವೇದಿಕೆಯಲ್ಲಿದ್ದ ಅತಿಥಿ ಗಣ್ಯರಾದ ಉಡುಪಿಯ ಡಿ ಎಸ್ ಪಿ ಜೈ ಶಂಕರ್, ಉಡುಪಿ ಬ್ಲಾಕ್ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ರಮೇಶ್ ಕಾಂಚನ್, ಸಿ ಎ. ಗಣೇಶ್ ಕಾಂಚನ್ ಉಡುಪಿ ಇವರನ್ನು ಗೌರವಿಸಲಾಯಿತು.
ಗೌರವ ಕಾರ್ಯದರ್ಶಿ ಶ್ರೀಧರ್ ಕಾಂಚನ್ ಪೊಲಿಪು,ಗತ ವರ್ಷದ ವರದಿ ವಾಚಿಸಿದರು.
ರಾಜೇಶ್ ಕಾಂಚನ್ ವಾರ್ಷಿಕ ಆಯಾ -ವ್ಯಯ ಪಟ್ಟಿಯನ್ನು ಸಭೆಯ ಮುಂದಿಟ್ಟರು.
ಇದೇ ಸಂಧರ್ಭ 18ನೆ ವರ್ಷದ ಪ್ರತಿಭಾ ಪುರಸ್ಕಾರದಲ್ಲಿ ಸುಮಾರು 38 ಮಕ್ಕಳಿಗೆ ಸುಮಾರು 55 ಸಾವಿರ ರೂಪಾಯಿ ನಗದು ನೀಡಿ ಅಭಿನಂದಿಸಲಾಯಿತು.


ಇದೇ ವೇಳೆ ಕಾಂಚನ್ ಮೂಲಸ್ಥಾನದಲ್ಲಿ ಸುಮಾರು 35 ವರ್ಷಗಳಿಂದ ಸಮಿತಿ ಸದಸ್ಯರಾಗಿ, 20 ವರ್ಷ ಮಹಿಳಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪದ್ಮಾವತಿ ಎಂ ಪುತ್ರನ್, ಹಾಗೂ ಸಮಿತಿಯ ಸದಸ್ಯರಾಗಿ 20 ವರ್ಷ ಸೇವೆ ಮಾಡಿದ ಗಿರೀಶ್ ಎಂ ಕಾಂಚನ್, ಇವರನ್ನು ವೇದಿಕೆಯ ಗಣ್ಯರು ಶಾಲು, ಫಲ ಪುಷ್ಪ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಉಪಾಧ್ಯಕ್ಷರಾದ ಮಧುಕರ್ ಕಾಂಚನ್ ತಣ್ಣೀರುಭಾವಿ, ಗೌರವ ಅಧ್ಯಕ್ಷ ಭಾಸ್ಕರ ಕಾಂಚನ್ ತಣ್ಣೀರುಭಾವಿ, ಮುಂಬೈ ಸಮಿತಿಯ ಪ್ರತಿನಿಧಿ ಪ್ರಭಾಕರ್ ಕಾಂಚನ್, ಸುಂದರ ಕಾಂಚನ್, ಗಣೇಶ್ ಕಾಂಚನ್ ಹಿರಿಯಡ್ಕ, ಸತೀಶ್ ಕಾಂಚನ್ ಪೊಲಿಪು, ದಿನೇಶ್ ಕಾಂಚನ್ ಉಡುಪಿ ಉಪಸ್ಥಿತರಿದ್ದರು.
ಶ್ರೀಧರ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರೆ, ಮಧುಕರ್ ಕಾಂಚನ್ ವಂದಿಸಿದರು.
ಮಾಧವ ಉಪಾದ್ಯಾಯರ ಪಾರೋಹಿತ್ಯದಲ್ಲಿ ನಾಗರ ಪಂಚಮಿಯ ವಿಶೇಷ ಮಹಾಪೂಜೆ ನಡೆದು, ಕೊನೆಗೆ ಸೇರಿದ್ದ ಎಲ್ಲರೂ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಭಾಗಿಯಾದರು.



Related posts

ಮುಲ್ಕಿ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಅವರ 24ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಕ್ಷೇತ್ರ ಪ್ರದಕ್ಷಿಣೆಯ 23ನೇ ದಿನ : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ದರುಶನ

Mumbai News Desk

ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿ ತೋನ್ಸೆ, ಇದರ ಜೀರ್ಣೋದ್ಧಾರಕ್ಕೆ ಭವ್ಯ ನಾಂದಿ: ಶಿಲಾನ್ಯಾಸ, ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

Mumbai News Desk

ಬಿಲ್ಲವ, ಬಂಟರ ವಿರುದ್ಧ ಅವಹೇಳನಕಾರಿ ಹೇಳಿಕೆ: ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ದೂರು

Mumbai News Desk

ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆ

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

Mumbai News Desk