30 C
Mumbai
April 24, 2026
Mumbai News Kannada
ತುಳುನಾಡು

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ






ಕಾಪು – ಪೊಲಿಪು : ಕಾಂಚನ್ ಮೂಲಸ್ಥಾನದ ವಾರ್ಷಿಕ ಮಹಾಸಭೆಯು ನಾಗರ ಪಂಚಮಿಯ ಶುಭ ದಿನದಂದು ದಿನಾಂಕ 09.08.24ರಂದು ಕಾಂಚನ್ ಮೂಲಸ್ಥಾನದ ಸಮುದಾಯ ಭವನದಲ್ಲಿ ಅಧ್ಯಕ್ಷರಾದ ಗಣೇಶ್ ಕಾಂಚನ್
ಅವರ ಅಧ್ಯಕ್ಷತೆಯಲ್ಲಿ ಜರಗಿತು.
ವೇದಿಕೆಯಲ್ಲಿದ್ದ ಅತಿಥಿ ಗಣ್ಯರಾದ ಉಡುಪಿಯ ಡಿ ಎಸ್ ಪಿ ಜೈ ಶಂಕರ್, ಉಡುಪಿ ಬ್ಲಾಕ್ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ರಮೇಶ್ ಕಾಂಚನ್, ಸಿ ಎ. ಗಣೇಶ್ ಕಾಂಚನ್ ಉಡುಪಿ ಇವರನ್ನು ಗೌರವಿಸಲಾಯಿತು.
ಗೌರವ ಕಾರ್ಯದರ್ಶಿ ಶ್ರೀಧರ್ ಕಾಂಚನ್ ಪೊಲಿಪು,ಗತ ವರ್ಷದ ವರದಿ ವಾಚಿಸಿದರು.
ರಾಜೇಶ್ ಕಾಂಚನ್ ವಾರ್ಷಿಕ ಆಯಾ -ವ್ಯಯ ಪಟ್ಟಿಯನ್ನು ಸಭೆಯ ಮುಂದಿಟ್ಟರು.
ಇದೇ ಸಂಧರ್ಭ 18ನೆ ವರ್ಷದ ಪ್ರತಿಭಾ ಪುರಸ್ಕಾರದಲ್ಲಿ ಸುಮಾರು 38 ಮಕ್ಕಳಿಗೆ ಸುಮಾರು 55 ಸಾವಿರ ರೂಪಾಯಿ ನಗದು ನೀಡಿ ಅಭಿನಂದಿಸಲಾಯಿತು.


ಇದೇ ವೇಳೆ ಕಾಂಚನ್ ಮೂಲಸ್ಥಾನದಲ್ಲಿ ಸುಮಾರು 35 ವರ್ಷಗಳಿಂದ ಸಮಿತಿ ಸದಸ್ಯರಾಗಿ, 20 ವರ್ಷ ಮಹಿಳಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪದ್ಮಾವತಿ ಎಂ ಪುತ್ರನ್, ಹಾಗೂ ಸಮಿತಿಯ ಸದಸ್ಯರಾಗಿ 20 ವರ್ಷ ಸೇವೆ ಮಾಡಿದ ಗಿರೀಶ್ ಎಂ ಕಾಂಚನ್, ಇವರನ್ನು ವೇದಿಕೆಯ ಗಣ್ಯರು ಶಾಲು, ಫಲ ಪುಷ್ಪ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಉಪಾಧ್ಯಕ್ಷರಾದ ಮಧುಕರ್ ಕಾಂಚನ್ ತಣ್ಣೀರುಭಾವಿ, ಗೌರವ ಅಧ್ಯಕ್ಷ ಭಾಸ್ಕರ ಕಾಂಚನ್ ತಣ್ಣೀರುಭಾವಿ, ಮುಂಬೈ ಸಮಿತಿಯ ಪ್ರತಿನಿಧಿ ಪ್ರಭಾಕರ್ ಕಾಂಚನ್, ಸುಂದರ ಕಾಂಚನ್, ಗಣೇಶ್ ಕಾಂಚನ್ ಹಿರಿಯಡ್ಕ, ಸತೀಶ್ ಕಾಂಚನ್ ಪೊಲಿಪು, ದಿನೇಶ್ ಕಾಂಚನ್ ಉಡುಪಿ ಉಪಸ್ಥಿತರಿದ್ದರು.
ಶ್ರೀಧರ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರೆ, ಮಧುಕರ್ ಕಾಂಚನ್ ವಂದಿಸಿದರು.
ಮಾಧವ ಉಪಾದ್ಯಾಯರ ಪಾರೋಹಿತ್ಯದಲ್ಲಿ ನಾಗರ ಪಂಚಮಿಯ ವಿಶೇಷ ಮಹಾಪೂಜೆ ನಡೆದು, ಕೊನೆಗೆ ಸೇರಿದ್ದ ಎಲ್ಲರೂ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಭಾಗಿಯಾದರು.



Related posts

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

Mumbai News Desk

“ಉಡುಪಿ ಆಂಥೆಮ್” ಉಡುಪಿ ಬಗ್ಗೆ ಸುಂದರ ಗೀತೆಯ ವಿಡಿಯೋ ಬಿಡುಗಡೆ

Mumbai News Desk