28.4 C
Mumbai
March 7, 2026
Mumbai News Kannada
ಸುದ್ದಿ

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.





   ಬೊಯಿಸರ್ : ತಾ.08 ಆಗಸ್ಟ್ 2024 ರಂದು ಬೊಯಿಸರ್ ಪಶ್ಚಿಮದಲ್ಲಿಯ ನಾವಾಪುರ ರೋಡ್ ನ    ಪ್ರಸಿದ್ಧ ಸದ್ಗುರು ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಅವಧೂತ ಶ್ರೀ ನಿತ್ಯಾನಂದ ಸ್ವಾಮೀಜಿಯವರ 63ನೇ ಪುಣ್ಯತಿಥಿಯನ್ನು ಆಚರಿಸಲಾಯಿತು.

ಪ್ರಾತಃಕಾಲ 6 ಗಂಟೆಗೆ ಗಣಹೋಮವನ್ನು ಶ್ರೀಮತಿ ಪದ್ಮಾವತೀ ಮತ್ತು ಸತ್ಯಾ ಕೋಟ್ಯಾನ್ ನೆರವೇರಿಸಿದರು. ಬಳಿಕ 7 ಕ್ಕೆ ಪಂಚಾಮೃತ ಕಲಶ ಅಭಿಷೇಕ   ಹಾಗೂ  ಭಕ್ತಾಭಿಮಾನಿಗಳಿಂದ ಸೀಯಾಳಾಭಿಷೇಕ ಕಾರ್ಯಕ್ರಮ ಜರಗಿತು.

           9.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಜರಗಿತು. ಮಂದಿರದ ವಿಶ್ವಸ್ಥ ಮಂಡಳಿಯ ಶ್ರೀನಿವಾಸ್ ಕೋಟ್ಯಾನ್ ” 13 ವರ್ಷಗಳ ಹಿಂದೆ ಸ್ಥಾಪನೆ ಆಗಿ ಲೋಕಾರ್ಪಣೆಗೊಂಡ ಬಳಿಕ ಶೃದ್ಧಾಳು ಭಕ್ತಾದಿಗಳ ಸತತ ಧಾರ್ಮಿಕ ಚಟುವಟಿಕೆಗಳಿಂದ ಈ ಮಂದಿರದ ಸ್ಥಳಕ್ಕೊಂದು ಪವಿತ್ರ ಕ್ಷೇತ್ರದ ಕಳೆ ಬಂದಿದೆ. ಪರಮಪೂಜ್ಯ ಸ್ವಾಮಿ  ನಿತ್ಯಾನಂದರ 63 ನೆಯ ಪುಣ್ಯತಿಥಿಯ ಸಂದರ್ಭದಲ್ಲಿ ಮಂದಿರದ ಸರ್ವತೋಮುಖ ಅಭಿವೃದ್ಧಿ ಹಾಗೂ ಸರ್ವಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಪವಿತ್ರ ಶ್ರಾವಣ ಮಾಸದಲ್ಲಿ ಜರಗಿದ ಈ ಸಾಮೂಹಿಕ ಸತ್ಯನಾರಾಯಣ ಮಹಾಪೂಜೆಯು ಸರ್ವಮಂಗಳವನ್ನುಂಟು ಮಾಡಲಿ ” ಎಂದು ನುಡಿದು ಭಕ್ತಾಭಿಮಾನಿಗಳ ಪರವಾಗಿ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ    ವಿಧಿ ವಿಧಾನಗಳನ್ನು ಹರೀಶ್ ಶಾಂತಿ ಹೆಜಮಾಡಿ ಮತ್ತು ರಾಜೇಶ್ ಶಾಂತಿ ಇವರು ಜರಗಿಸಿದರು. 

  ಈ ಕಾರ್ಯಕ್ರಮದಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರು , ಸ್ಥಳೀಯ ಹಾಗೂ ವಿವಿಧ ಊರುಗಳಿಂದ ಆಗಮಿಸಿದ ಉದ್ಯಮಿಗಳು , ವಿವಿಧ ಸಂಸ್ಥೆಯ ಪದಾಧಿಕಾರಿಗಳು , ಸದ್ಗುರು ನಿತ್ಯಾನಂದ ಭಜನಾ ಮಂಡಳಿ ಮತ್ತು ಶ್ರೀ ಸ್ವಾಮಿ ನಿತ್ಯಾನಂದ ಭಕ್ತ ಮಂಡಳಿಯ ಸದಸ್ಯರು ಹಾಗೂ ತುಳು ಕನ್ನಡಿಗ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಉಸ್ತುವಾರಿಯಲ್ಲಿ ರಮಾನಂದ ಪೂಜಾರಿ ಮತ್ತು ಸೇವಾ ಬಳಗದ ಸದಸ್ಯರು ಸಹಕರಿಸಿದರು.

ಮದ್ಯಾಹ್ನದ ಮಹಾ ಮಂಗಳಾರತಿಯ ಬಳಿಕ ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆಯು ಜರಗಿತು.

ಚಿತ್ರ ಹಾಗೂ ವರದಿ : ಪಿ.ಆರ್.ರವಿಶಂಕರ್ ಡಹಾಣೂ ರೋಡ್

8483980035



Related posts

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

‘ನೆಲೆ ಫೌಂಡೇಶನ್ ‘ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ 2025

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಶ್ರೀನಿವಾಸ ಜೋಕಟ್ಟೆ ಅವರಿಗೆ ‘ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ’ ಪ್ರದಾನ

Mumbai News Desk

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ

Mumbai News Desk