July 23, 2026
Mumbai News Kannada
ಸುದ್ದಿ

ಪಾಣೆಮಂಗಳೂರಲ್ಲಿ ಶ್ರೀನಿವಾಸ ಸಾಫಲ್ಯ ದಂಪತಿಗೆ ಸನ್ಮಾನ 







ಮುಂಬಯಿ : ಪಾಣೆ ಮಂಗಳೂರು ಸುಮಂಗಲ ಸುಮಂಗಲ ಸಭಾಂಗಣದಲ್ಲಿ ವಿಶ್ವ ಗಾಣಿಗರ ಚಾವಡಿ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರ ಕಾರ್ಯಕ್ರಮ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವು ಆ. 11ರಂದು ನಡೆಯಿತು. ಈ ಸಂದರ್ಭದಲ್ಲಿ ’ಗೇನದ ತುಡರ್ ನಿಧಿ ಸಮರ್ಪಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಂಬಯಿಯ ಸಾಪಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಾಫಲ್ಯ ಮತ್ತು ರಿತಿಕಾ ಶ್ರೀನಿವಾಸ್ ದಂಪತಿಯನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ ರಾಘು ಸಪಲ್ಯ, ಸುಮಂಗಳ ಕ್ರೆಡಿಟ್ ಸೊಸೈಟಿಯ ಅಧ್ಯಕ್ಷ ನಾಗೇಶ್ ಕಲ್ಲಡ್ಕ, ಗಾಣಿಗರ ಸಂಘದ ಅಧ್ಯಕ್ಷ ಭಾಸ್ಕರ್ ಎಡಪದವು, ಕರಾವಳಿ ಕ್ರೆಡಿಟ್ ಸೊಸೈಟಿಯ ನಿರ್ದೇಶಕಿ ಉಷಾ ಕೇಶವ ಮಳಲಿ, ರಾಮದಾಸ್ ಬಂಟ್ವಾಳ, ಕೇಶವ ದೈಪಲ, ಉಮೇಶ್ ಅರಳ,  ಟ್ರಸ್ಟ್ ನ ಅಧ್ಯಕ್ಷ ಹರಿಪ್ರಸಾದ್ ಶಕ್ತಿನಗರ ಉಪಸ್ಥಿತರಿದ್ದರು.

ಟ್ರಸ್ಟ್ ನ ಕಾರ್ಯದರ್ಶಿ ದೇವಿ ಪ್ರಸಾದ್ ಎಂ ಸ್ವಾಗತಿಸಿದರು, ಉಪಾಧ್ಯಕ್ಷ ಗಣೇಶ್ ಡಿ ಶಂಭೂರು ವಂದಿಸಿದರು. ವಿಜಯಾ ಪೂಯ್ತಾಜೆ ಕಾರ್ಯಕ್ರಮ ನಿರೂಪಿಸಿದರು.



Related posts

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.

Mumbai News Desk

ನಾಸಿಕ್ ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ:

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) – ವೈದ್ಯಕೀಯ ಚಿಕಿತ್ಸೆಗೆ ನೆರವು.

Mumbai News Desk

ಹೊಸ ಹಣಕಾಸು ವರ್ಷ 2026-27: ಜನಸಾಮಾನ್ಯರ ಬದುಕಿನ ಮೇಲಾಗುವ ಪ್ರಮುಖ ಬದಲಾವಣೆಗಳ ಕೈಪಿಡಿ

Mumbai News Desk