July 23, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.







ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಕಳೆದ 65 ವರ್ಷಗಳಿಂದ ಧರ್ಮಗ್ರಂಥದ ವಾಚನ ನಡೆಯುತ್ತಿದ್ದು, ಈ ವರ್ಷ ಜುಲೈ 16ಕ್ಕೆ ಕುಮಾರವ್ಯಾಸ ವಿರಚಿತ “ಮಹಾಭಾರತ ” ಎಂಬ ಪುಣ್ಯ ಕಥಾ ವಾಚನವು ಆರಂಭವಾಗಿತ್ತು.ಜಯ ದೇವಾಡಿಗ ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರಿಂದ ವಾಚನ ಆರಂಭವಾಗಿತ್ತು.
ಇದೀಗ ಕಥಾ ವಾಚನದ ಮಂಗಲೋತ್ಸವವು ಆಗಸ್ಟ್ 17ರಂದು,ಶನಿವಾರ ಸಾಯಂಕಾಲ 8 ಗಂಟೆಗೆ ನೆರವೇರಲಿದೆ.
ಅ ಪ್ರಯುಕ್ತ ಭಕ್ತಾದಿಗಳು ಸಕಾಲದಲ್ಲಿ ಆಗಮಿಸಿ, ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಮೊಗವೀರ ಮಹಿಳಾ ಮಂಡಳಿ ಫಲಿಮಾರು, ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.
ತಾ. 18.8.24ರಂದು ಸಂಜೆ 4.30ಗಂಟೆಗೆ ಶ್ರೀ ವಿನಾಯಕ ಯಕ್ಷಕಲಾ ತಂಡ ಕೆರೆಕಾಡು, ಮೂಲ್ಕಿ, ಇವರಿಂದ “ತುಳಸಿ ಜಲಂಧರ ” ಯಕ್ಷಗಾನ ಕಾರ್ಯಕ್ರಮ ಫಲಿಮಾರು ಮೊಗವೀರ ಮಹಿಳಾ ಮಂಡಳಿಯ ವತಿಯಿಂದ ಜರಗಲಿದೆ.
ವಿ ಸೂ : ಭಕ್ತಾದಿಗಳು ನೀಡುವ ಉದಾರ ಧನ ಸಹಾಯವನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಲಾಗುವುದು.



Related posts

ಕಲಾಜಗತ್ತಿನ ಆಯೋಜನೆಯಲ್ಲಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ಮೂಡಿಬಂದು ಜನರನ್ನು ರಂಜಿಸಲಿರುವ “ಬೊಂಬಾಯಿಡ್ ತುಳುನಾಡ್ ” ತುಳು ಉತ್ಸವ

Mumbai News Desk

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.

Mumbai News Desk

ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಕಿಲ್ಪಾಡಿ, ಮೂಲ್ಕಿ : ಫೆ. 7ಕ್ಕೆ. ಸಿರಿಸಿಂಗಾರದ ನೇಮೋತ್ಸವ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ತುಳು ಸಂಘ ಬೊರಿವಲಿ, ಡಿ. 8 ರಂದು ಸ್ನೇಹ ಮಿಲನ

Mumbai News Desk