30 C
Mumbai
April 24, 2026
Mumbai News Kannada
ಪ್ರಕಟಣೆ

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.






ಮುಂಬಯಿ ಪರಿಸರದ ಹಿರಿಯ ಸಮಾಜ ಸೇವಕ, ಸಂಘಟಕ, ಹಲವಾರು ಸಂಘಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಭಾಯಂದರ್ ನಿವಾಸಿ ಚಿತ್ರಾಪು ಕೆ.ಎಮ್.ಕೋಟ್ಯಾನ್(ಗೌ.ಕಾರ್ಯದರ್ಶಿ ವಿದ್ಯಾದಾಯಿನಿ ಸಭಾ, ಮುಂಬಯಿ)ರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದಾರೆ.
ಈ ಕಾರ್ಯಕ್ರಮವು ಆದಿತ್ಯವಾರ ಅ.25ರಂದು ಸಾಯಂಕಾಲ 4.30ರಿಂದ ಭಾಯಂದರ್ ಪೂರ್ವದ ನವಘರ್ ರಸ್ತೆಯಲ್ಲಿರುವ ಹನುಮಾನ್ ಮಂದಿರದ ಸಮೀಪ ಹಾಗೂ ಎಸ್.ಎನ್.ಕಾಲೇಜಿನ ಎದುರುಗಡೆ ಇರುವ ಸೈಂಟ್ ಅಗ್ನಿಸ್ ಹೈಸ್ಕೂಲ್ ಇದರ ಸಭಾಂಗಣದಲ್ಲಿ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಪ್ರಿಯ ಬಳಗ ಮೀರಾಭಾಯಂದರ್ ಇವರಿಂದ ಕುಶ – ಲವ ಕಾಳಗ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಕೆ.ಎಮ್ ರವರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಕೆ.ಎಮ್.ಕೋಟ್ಯಾನ್ ಅಭಿನಂದನಾ ಬಳಗದ ಪರವಾಗಿ ಜಿ.ಟಿ.ಆಚಾರ್ಯ, ಡಾ.ಸತೀಶ್ ಬಂಗೇರ, ಡಾ.ಪ್ರಕಾಶ್ ಕುಮಾರ್ ಮೂಡಬಿದ್ರೆ, ಅಶೋಕ್ ಶೆಟ್ಟಿ ಬಿಇಎಸ್ಟಿ ಹಾಗೂ ಪ್ರೇಮಾ ಮಾಧವ ಹೆಗ್ಡೆ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ. ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ..9324759589 ಅಥವಾ 9769797495ರಲ್ಲಿ ವಿಚಾರಿಸಬಹುದು.



Related posts

ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ,

Mumbai News Desk

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ

Mumbai News Desk

ಎ. 12 ರಿಂದ 18 ರ ವರಗೆ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಾರ್ಷಿಕ ಉತ್ಸವ.

Mumbai News Desk

ಏಪ್ರಿಲ್ 4ರಿಂದ ಕುರುಡುಂಜೆ ಗರಡಿಯಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಸಂಭ್ರಮ

Mumbai News Desk

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10 ನೇ ತರಗತಿಗೆ ನೇರ ಪ್ರವೇಶ. : ತುಳು ಕನ್ನಡಿಗರಿಗೆ ಸದಾವಕಾಶ

Mumbai News Desk

ಶ್ರೀ ಮಣಿಕಂಠ ಸೇವಾ ಸಮಿತಿ ,ವಸಾಯಿ ಡಿ.13ರಂದು 22ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk