30.9 C
Mumbai
June 8, 2026
Mumbai News Kannada
ಮುಂಬಯಿ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಸಂಚಾಲಕರು ಶ್ರೀ ಮುಂಬ್ರಾ ಮಿತ್ರ ಭಜನಾ ಮಂದಿರ – 47 ನೇ ವಾರ್ಷಿಕ ಮಹಾ ಸಭೆ





ಮುಂಬ್ರಾ ಮಿತ್ರ ಭಜನಾ ಮಂಡಳಿಯ 47 ನೇ ವಾರ್ಷಿಕ ಮಹಾಸಭೆಯು 18 ಆಗಸ್ಟ್ ರಂದು ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ ಡೊಂಬಿವಿಲಿ ಪೂರ್ವದ ಯಶವಂತ್ ನಗರದ ರಾಮಚಂದ್ರ ನಿವಾಸ್ ದಲ್ಲಿರುವ ಮಂದಿರದ ಸಭಾಗ್ರಹದಲ್ಲಿ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಜರಗಿತು ದೇವತಾ ಪ್ರಾರ್ಥನೆಯೊಂದಿಗೆ ಜರಗಿತು ಹಾಗೂ ಗತ ವರ್ಷದಲ್ಲಿ ನಿಧನರಾದ ಸದಸ್ಯರುಗಳಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಮಹಾಸಭೆಯಲ್ಲಿ ಮಂದಿರದ ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ಸಚಿನ್ ಜಿ. ಪೂಜಾರಿ ರವರು ಸ್ವಾಗತಿಸಿ ಮತ್ತು ಗತ ವರ್ಷದ ವರದಿ ಹಾಗೂ ಗತ ವರ್ಷದ ಮಹಾಸಭೆಯ ಟಿಪ್ಪಣಿಯನ್ನು ಓದಿ ಮಂಜೂರು ಮಾಡಲಾಯಿತು . ಕೋಶಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಆಯಾ ವ್ಯಯ ಪಟ್ಟಿ ಮಂಡಿಸಿದರು.

ಸಭೆಯಲ್ಲಿ ನವೆಂಬರ್ ತಿಂಗಳಲ್ಲಿ ಏಕಾಹ ಭಜನೆ ಹಾಗು ಡಿಸೆಂಬರ್ ತಿಂಗಳಲ್ಲಿ ಕಾರ್ತೀಕ ದೀಪೋತ್ಸವ ಹಾಗು ರಕ್ತ ದಾನ ಶಿಬಿರ ಕೈಗೊಳ್ಳುವುದಾಗಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಯಿತು ಮಂದಿರ ದ ಸುವರ್ಣ ಮಹೋತ್ಸವದ ಬಗ್ಗೆ ಪೂರ್ವ ತಯಾರಿ ಹಾಗು ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮುಂಬರುವ ಸುವರ್ಣ ಮಹೋತ್ಸವಕ್ಕೆ ದೇವರಿಗೆ ಏಕ ಶಿಲಾ ಪಾಣಿ ಪೀಠ ಮತ್ತು ದೇವರ ಬಿಂಬಕ್ಕೆ ಪ್ರಭಾವಳಿಯ ಅವಶ್ಯಕತೆ ಇದ್ದು ಉಪಾಧ್ಯಕ್ಷರಾದ ಅರವಿಂದ್ ಪದ್ಮಶಾಲಿ, ಗೌರವ ಅಧ್ಯಕ್ಷರಾದ ನಿತಿನ್ ಪ್ರಕಾಶ್ ಪುತ್ರನ್ ರವರು ಮಾತಾಡುತ್ತ ನಾವೆಲ್ಲರೂ ಸೇರಿ ಪೂರ್ಣ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು.

ಮಂದಿರದ ವತಿಯಿಂದ ಜರಗುವ ಧಾರ್ಮಿಕ , ಸಾಮಾಜಿಕ , ಶೈಕ್ಷಣಿಕ ಕಾರ್ಯಕ್ರಮಗಳಿಗೆ ತನು-ಮನ-ಧನ ದ ಸಹಾಯವನ್ನು ನೀಡುತಾ ಬಂದಿರುವ ದಾನಿಗಳಿಗೆ , ಸದಸ್ಯರುಗಳಿಗೆ ಕೃತಜ್ಞತೆಯನ್ನು ಈ ಸಂದರ್ಭದಲ್ಲಿ ಸಲ್ಲಿಸಲಾಯಿತು. ಹೊಸದಾಗಿ ಮಂದಿರದ ಸದಸ್ಯತನವನ್ನು ಪಡೆದ ಎಲ್ಲ ಸದಸ್ಯರನ್ನು ಅಭಿನಂದಿಸಲಾಯಿತು .

ಮಂದಿರದ ಕಾರ್ಯಕಲಾಪದ ಬಗ್ಗೆ ಸದಸ್ಯರ ಪರವಾಗಿ ಸುರೇಶ್ ನಾಯ್ಕ್ , ಲತೇಶ್ ಸಾಲಿಯಾನ್ , ಹರೀಶ್ ಪದ್ಮಶಾಲಿ , ಪ್ರಶಾಂತ್ ಪೂಜಾರಿ, ಸವಿತಾ ಸಾಲಿಯಾನ್ , ಸ್ನೇಹ ಪೆವೇಕರ್ , ನಯನ ಕಾಂಚನ್ ಸಲಹೆ ನೀಡಿ ಸಹಕರಿಸಿದರು. ನಂತರ ಗೌರವ ಪ್ರದಾನ ಕಾರ್ಯದರ್ಶಿ ಸಚಿನ್ ಪೂಜಾರಿ ರವರು ಸರ್ವರನ್ನು ವಂದಿಸಿದರು.



Related posts

ಮೀರಾ – ಭಾಯಂದರ್ ನಲ್ಲಿ ಶ್ರೀ ನಾರಾಯಣ ಗುರು ಭಜನಾ ಮಂಡಳಿ ಉದ್ಘಾಟನೆ. ಕಾರ್ಯಾಧ್ಯಕ್ಷರಾಗಿ ಉದಯ ಡಿ ಸುವರ್ಣ ಆಯ್ಕೆ

Mumbai News Desk

ಮುಂಬಯಿ ಸ್ವರ್ಣೋದ್ಯಮಿ ಶ್ರೀಧರ ವಿ. ಆಚಾರ್ಯ ಅವರಿಗೆ ‘ಬಿ. ಹರಿಶ್ಚಂದ್ರ ಆಚಾರ್ಯ ಸ್ಮಾರಕ ಪ್ರಶಸ್ತಿ’ ಪ್ರದಾನ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಕ್ಷ್ ಜೆ.ಶೆಟ್ಟಿಗೆ ಶೇ.94.20 ಅಂಕ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ (ರಿ ) ಮಹಿಳಾ ವಿಭಾಗದ ವತಿಯಿಂದ ಖಾರ್ ಘರ್ ನಲ್ಲಿರುವ ಗಿರಿಜಾ ವೆಲ್ಫೇರ್ ಅನಾಥಾಶ್ರಮಕ್ಕೆ ಭೇಟಿ

Mumbai News Desk

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ

Mumbai News Desk

ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿ, ಮಹಿಳಾ ವಿಭಾಗ ನವರಾತ್ರಿ ಉತ್ಸವ ಸಂಭ್ರಮ. ದಾಂಡಿಯಾ .

Mumbai News Desk