28.4 C
Mumbai
March 7, 2026
Mumbai News Kannada
ಮುಂಬಯಿ

 ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಬೊರಿವಿಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ





ಸನ್ನಿಧಾನದ ಧಾರ್ಮಿಕ ಕಾರ್ಯಕ್ರಮಗಳ ಯಶಸ್ವಿಗೆ ಭಕ್ತಾಧಿಗಳೇ ಶ್ರೀರಕ್ಷೆ : ಪ್ರದೀಪ್ ಸಿ ಶೆಟ್ಟಿ

ಚಿತ್ರ,ವರದಿ: ರಮೇಶ್ ಉದ್ಯಾವರ

ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಟ್ರಸ್ಟ್ ಜಯರಾಜ್ ನಗರ ಬೊರಿವಿಲಿ ಪಶ್ಚಿಮ ಇಂದು ಮಹಿಳೆಯರಿಗಾಗಿ ವರಲಕ್ಷ್ಮಿ ವೃತ ಮಹಾಪೂಜೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಜರುಗಿತು. 

 ಈ ಸಂದರ್ಭದಲ್ಲಿ ಸಧ್ಭಕ್ತರನ್ನು ಉದ್ದೇಶಿಸಿ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಣಂಜಾರು ಕೊಳಕ್ಕೆ ಬೈಲು ಪ್ರದೀಪ್ ಸಿ  ಶೆಟ್ಟಿ ಬದಲಾವಣೆಯ ಕಾಲ ಘಟ್ಟದಲ್ಲಿ ನಾವು ನಮ್ಮ ಸಂಪ್ರದಾಯಗಳನ್ನು ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಇಂದಿನ ಶ್ರೀ ವರ ಮಹಾಲಕ್ಷ್ಮೀಯ ಪೂಜೆಯ ಸೇವಾರ್ಥಿಗಳೇ ಸಾಕ್ಷಿಯಾಗಿದೆ. ಸನ್ನಿಧಾನದ ಪ್ರತಿಯೊಂದು ಧಾರ್ಮಿಕ, ಅಧ್ಯಾತ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ವಿಗೆ ಭಕ್ತಾದಿಗಳ ಸಂಕಲ್ಪವೇ ಶ್ರೀರಕ್ಷೆಯಾಗಿದೆ. ಸಂಪತ್ತು, ಅದೃಷ್ಟ, ಸಮೃದ್ದಿ ಆರೋಗ್ಯ ದಯಪಾಲಿಸುವ ಶ್ರೀಲಕ್ಷ್ಮಿನಾರಾಯಣ ತಮಗೆಲ್ಲ ಮೈ ಮನಸ್ಸಿಗೆ ಶಾಂತಿ ಆರೋಗ್ಯ ನೀಡಲಿ ಎಂದರು.

ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ಪುರೋಹಿತರಾದ ದೇವರಾಜ್ ನೆಲ್ಲಿಕಾರು ಮಹಾಲಕ್ಷ್ಮಿ ವ್ರತದ ಬಗ್ಗೆ ಮಾತನಾಡಿದ ಅವರು ಲೌಕಿಕ ಮತ್ತು ಅಲೌಕಿಕ ಬದುಕಿನಲ್ಲಿ ತನು ಮನ ಮನೆ ಶುದ್ಧೀಕರಣಗೊಳ್ಳಲು ಭಕ್ತಿ ಮತ್ತು ಅಂತರಂಗದ ಭಕ್ತಿಯ ಸಂಪತ್ತನ್ನು ಹೆಚ್ಚಿಸಬೇಕು. ಆವಾಗ ನಮ್ಮ ಮನೋ ಇಚ್ಛೆಯ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಸಾರ್ಥಕವಾಗುತ್ತದೆ ಎಂದು ಹೇಳಿದರು.    ಬಳಿಕ  ಪುರೋಹಿತರಿಂದ ಮಹಾಮಂಗಳಾರತಿ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆರಾಧ್ಯ ದೇವತೆ ಮಹಿಷಮರ್ದಿನಿ ದೇವಿಗೆ ವಿಶೇಷ ಪೂಜೆ ನೆರವೇರಿತು. ಸೇವಾರ್ಥಿಗಳಿಗೆ ವಿಶೇಷ ಪೂಜಾ ಪ್ರಸಾದ ವಿತರಿಸಲಾಯಿತು ಮಹಿಳೆಯರಿಂದ ಮಹಾಲಕ್ಷ್ಮಿ ಸ್ತೋತ್ರ ಭಜನೆ ಕಾರ್ಯಕ್ರಮಗಳು ಜರುಗಿದವು.ಕಾರ್ಯಕ್ರಮದಲ್ಲಿ ದೇವಸ್ಥಾನದ ವಂಶಸ್ಥ ಸ್ಥಾಪಕ ಮೊಕ್ತೇಸರರಾದ ಶ್ರೀಮತಿ ಮತ್ತು ಶ್ರೀ ಕಲ್ಲಮುಂಡ್ಕೂರು ಹರಿಯಾಳಗುತ್ತು ಜಯರಾಜ್ ಶ್ರೀಧರ್ ಶೆಟ್ಟಿ ದಂಪತಿಗಳು ಮೊಕ್ತೇಸರರಾದ ಜಯಪಾಲಿ ಅಶೋಕ್ ಶೆಟ್ಟಿ ದೇವಸ್ಥಾನದ ವಿಶ್ವಸ್ಥ ಕುಟುಂಬದ ಸದಸ್ಯರು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಬೆಳ್ಮಣ್ಣು ವೆಂಕಟರಮಣ ತಂತ್ರಿ ಅರ್ಚಕವೃಂದ ಮತ್ತು ಮಹಿಷಮರ್ದಿನಿ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ದಾನಿಗಳು, ದೇವಸ್ಥಾನದ ಹಿತೈಷಿಗಳು ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಭಕ್ತಾಧಿಗಳು ತೀರ್ಥ ಪ್ರಸಾದ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು.



Related posts

ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಅಭಿನಂದನಾ ಸಭೆ

Mumbai News Desk

ಶ್ರೀ ಜಗದಂಬ ಮಂದಿರ ಡೊಂಬಿವಲಿ ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk

ಯಕ್ಷಪ್ರಿಯ ಬಳಗ ಮೀರಾಭಾಯಂದರ್’ ಇದರ ‘ಯಕ್ಷ ನವಮಿ’ ಕಾರ್ಯಕ್ರಮ

Mumbai News Desk

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.

Mumbai News Desk

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ

Mumbai News Desk