28.4 C
Mumbai
March 7, 2026
Mumbai News Kannada
ಪ್ರಕಟಣೆ

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ಸೆ. 7 ರಂದು 94 ನೇ ವರ್ಷದ ಗಣೇಶೋತ್ಸವ ಆಚರಣೆ





ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಆಶ್ರಯದಲ್ಲಿ 94 ನೇ ವರ್ಷದ ಗಣೇಶೋತ್ಸವವು ಸೆ. 7 ರಂದು ನಾನಾಚೌಕ್ ಸಮೀಪದಲ್ಲಿರುವ ಗಾಂವ್ದೇವಿಯ ಜೆ. ಕೆ. ಟವರ್ ಆವರಣದಲ್ಲಿ ಜರಗಲಿದೆ. ಅಂದು ಬೆಳಿಗ್ಗೆ ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ವಿಘ್ನೇಶ್ವರನ ಆಗಮನವಾಗಲಿದ್ದು ತದನಂತರ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ
ಸಂಜೆ ಗಂಟೆ 7 ಕ್ಕೆ ಸರಿಯಾಗಿ ಗ್ರಾಮದೇವಿಯ ಸನ್ನಿಧಾನದಲ್ಲಿ ಪೂಜೆ ನಡೆಯಲಿದ್ದು ಬಳಿಕ ಸರ್ವಾಲಂಕೃತನಾದ ಶ್ರೀ ವಿಘ್ನೇಶ್ವರನಿಗೆ ಮಹಾಪೂಜೆ ನೆರವೇರಲಿದೆ ಯಕ್ಷ ಪ್ರಿಯ ಬಳಗ ಮೀರಾ-ಭಾಯಂದರ್ ಇವರ ಹಿಮ್ಮೇಳದೊಂದಿಗೆ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿಯವರ ನೇತೃತ್ವದಲ್ಲಿ ವೇದಮೂರ್ತಿ ನವೀನ ಭಟ್ ಚೆಂಬೂರು ಪೂಜಾ ಕೈಂಕರ್ಯವನ್ನು ನಿರ್ವಹಿಸಲಿದ್ದು ಬಳಿಕ ನೆರೆದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಗುವುದೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
ಆ ಪ್ರಯುಕ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವಿಘ್ನೇಶ್ವರನ ಕೃಪೆಗೆ ಪಾತ್ರರಾಗುವುದಲ್ಲದೆ ಕಳೆದ 94 ವರ್ಷಗಳಿಂದ ನಿರಂತರವಾಗಿ ನಡೆಯುವ ಈ ಗಣೇಶೋತ್ಸವವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿ ವಿನಂತಿಸಿದ್ದಾರೆ

.

.

.



Related posts

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.

Mumbai News Desk

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ ; ದೇವಿಯ ವಾರ್ಷಿಕ ಮಹೋತ್ಸವ ಶುಕ್ರವಾರದಿಂದ ಆರಂಭ

Mumbai News Desk

ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ, ಮಾ. 8ಕ್ಕೆ , ಸಮಾಜ ಕಲ್ಯಾಣ ಸಮಿತಿ ವತಿಯಿಂದ ಆರ್ಥಿಕ ಸಹಾಯದ ಅರ್ಜಿ ವಿತರಣೆ,

Mumbai News Desk

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .

Mumbai News Desk