28.4 C
Mumbai
March 7, 2026
Mumbai News Kannada
ಸುದ್ದಿ

ಡಹಾಣೂವಿನ ಬೀದಿಗಳಲ್ಲಿ ಗಣರಾಯನ ದರ್ಬಾರು.





ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್

ಡಹಾಣೂ : ತಾ.09.09.2024. ಕಳೆದ ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಡಹಾಣೂವಿನ ಪ್ರತಿಷ್ಟಿತ ರಾಜಾಪುರ ಸಾರಸ್ವತ ಸಮಾಜ ಸೇವಾ ಮಂಡಳದ 26ನೆಯ ವರ್ಷದ ಮಂಗಲಮೂರ್ತಿ ಮಹೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ  ವಿಜೃಂಭಣೆಯಿಂದ ಜರಗಿ ಸಂಪನ್ನಗೊಂಡಿತು. ಧಾರ್ಮಿಕ ವಿಧಿವಿಧಾನಗಳನ್ನು  ವೈದಿಕ ಶ್ರೀ ವಸಂತ್ ಭಟ್ ಜರಗಿಸಿದರು.  ಸಂಪೂರ್ಣ ವ್ಯವಸ್ಥಾಪನೆಯಲ್ಲಿ ಯುವವೃಂದದ ಸದಸ್ಯರು ಸಹಕರಿಸಿದರು.

          ಪ್ಲಾಸ್ಟಿಕ್ ಮುಕ್ತ ಆಚರಣೆಗೆ ಮಹತ್ವ ನೀಡಿದ  ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮಂಗಳೂರು ಮಲ್ಲಿಗೆಯೂ ಸೇರಿದಂತೆ ವೈವಿಧ್ಯಮಯ ಹೂಗಳ ಅಲಂಕಾರ ಮತ್ತು ಮಂಗಲಮೂರ್ತಿಯ ಶೋಭಾಯಾತ್ರೆಯಲ್ಲಿ ಗೋಮಾಂತಕದ ಮೂಲ ಮಠದ ಮಾದರಿಯಲ್ಲಿನ ವಿಶೇಷ ಪಲ್ಲಕ್ಕಿಯು ರಾಜಬೀದಿಯ ಇಕ್ಕೆಲಗಳಲ್ಲಿ ಜಮಾಯಿಸಿದ ನಗರವಾಸಿಗಳ  ಗಮನ ಸೆಳೆಯಿತು. 

            ಸ್ಥಳೀಯ ಭಕ್ತಾದಿಗಳು ಮತ್ತು  ವಿವಿಧ  ಸಂಸ್ಥೆಗಳ ಪದಾಧಿಕಾರಿಗಳೂ   ಸೇರಿದಂತೆ ತುಳುವ ಕನ್ನಡಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಶೋಭಾಯಾತ್ರೆಯ ಬಳಿಕ ಡಹಾಣೂ ಉತ್ತರದಲ್ಲಿನ ಕಂಕ್ರಾಡಿ ನದಿಯಲ್ಲಿ ಶ್ರೀಗಣೇಶ ಮೂರ್ತಿಯ ಜಲಸ್ಥಂಭನ ಕಾರ್ಯಕ್ರಮ ಜರಗಿತು.

 ಡಹಾಣೂ ವಲಯದ ಜಾಹೀರಾತಿಗಾಗಿ ಸಂಪರ್ಕಿಸಿ : ಪಿ.ಆರ್.ರವಿಶಂಕರ್ 8483980035



Related posts

ಚಿತ್ರದುರ್ಗ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ

Mumbai News Desk

ದೆಹಲಿ : ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

Mumbai News Desk

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Mumbai News Desk

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk

ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ 

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (NGO); ಜಿಲ್ಲೆಯ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk