30 C
Mumbai
April 24, 2026
Mumbai News Kannada
ಮುಂಬಯಿ

ಕಲೀನಾ ಸೌತ್ ಸೇವಾ ಸಂಘದ ಸಾರ್ವಜನಿಕ ಗಣೇಶೋತ್ಸವ.






ಚಿತ್ರ, ವರದಿ: ಉಮೇಶ್ ಕೆ. ಅಂಚನ್.

ಮುಂಬಯಿ, ಸೆ. 11:ಸಂತಾಕ್ರೂಸ್ ಪೂರ್ವದ ಕಲೀನಾ ಪೋಲಿಸ್ ಚೌಕಿ ಎದುರುಗಡೆ ಇರುವ ಸೌತ್ ಸೇವಾ ಸಂಘದ ವತಿಯಿಂದ 13ನೇ ವರ್ಷದ ಐದು ದಿನಗಳ ಸಾರ್ವಜನಿಕ ಗಣೇಶೋತ್ಸವ ಸಮಾರಂಭವು ಆರಂಭಗೊಂಡಿದ್ದು 4ನೇ ದಿವಸ ಸೆ. 10ರಂದು ರಘುಚಂದ್ರ ಆಚಾರ್ಯ ಪೊವಾಯಿ ಅವರ ಪೌರಹೋತ್ಯದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ, ಗಣೇಶ ಪೂಜೆ ನಡೆಯಿತು. ಸಂಘದ ಉಪಾದ್ಯಕ್ಷ ಗಣೇಶ್ ಶೆಟ್ಟಿ ಉಳೆಪಾಡಿ ದಂಪತಿಗಳು ಪೂಜಾ ಕೖಂಕಾರ್ಯದಲ್ಲಿ ಉಪಸ್ಥಿತರಿದ್ದರು.ತದನಂತರ ಧಾರ್ಮಿಕ ಸಭೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿತ್ತು.


ಧಾರ್ಮಿಕ ಸಭೆಯಲ್ಲಿ ಕನ್ನಡ ಜಾನಪದ ಪರಿಷತ್, ಮಹಾರಾಷ್ಟ್ರ ಘಟಕದ ಅದ್ಯಕ್ಷ ಹಾಗೂ ರಾಷ್ಟ್ರೀಯ ಕಿಸಾನ್ ಕಾಂಗ್ರೆಸಿನ ಸಂಯೋಜಕ ಸುರೇಶ್ ಶೆಟ್ಟಿ ಯೆಯ್ಯಾಡಿ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ಸಹಕರಿಸಿದ ದಾನಿಗಳನ್ನು ಸಂಘದ ಅದ್ಯಕ್ಷ ಸುಂದರ ಶೆಟ್ಟಿ ವಾಮದಪದವು ಹಾಗೂ ಪದಾಧಿಕಾರಿಗಳು ಸತ್ಕರಿಸಿದರು. ಕಾರ್ಯಕ್ರಮವನ್ನು ಪತ್ರಕರ್ತ ಬಾಬು ಬೆಲ್ಚಡ ನಿರೂಪಿಸಿದರು.
ಸಂಘದ ಗೌರವಾದ್ಯಕ್ಷ ಚಿತ್ರೇಶ್ ಶೆಟ್ಟಿ ಪಾಂಗಾಳ, ಉಪಾದ್ಯಕ್ಷ ಮಂಜುನಾಥ್ ಆರ್. ಶೆಟ್ಟಿ , ಕಾರ್ಯದರ್ಶಿ ಸಂದೀಪ್ ಬಂಗೇರ ನಕ್ರೆ, ಜತೆ ಕಾರ್ಯದರ್ಶಿಗಳಾದ ಗಣೇಶ್ ಸುವರ್ಣ, ಶೇಖರ್ ಆರ್. ಸಾಲ್ಯಾನ್, ಕೋಶಾಧಿಕಾರಿ ಚಂದ್ರಹಾಸ್ ಕೋಟ್ಯಾನ್, ಜತೆ ಕೋಶಾಧಿಕಾರಿಗಳಾದ ಮಂಗೇಶ್ ನಾಯಕ್, ಅವಿನಾಶ್ ಅಮೀನ್, ಹಾಗೂ ಸಲಹೆಗಾರರು, ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದರು.

.

.

.

.



Related posts

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಭಾರತ್ ಬ್ಯಾಂಕ್‌ನ ಬಾಂದ್ರ ಪೂರ್ವ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮದ ಆಚರಣೆ

Mumbai News Desk

ನವೋದಯ ಕನ್ನಡ ಸೇವಾ ಸಂಘ (ರಿ), ಥಾಣೆ ಇದರ ಆಯೋಜನೆಯಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡ ಭಜನಾ ಮಂಗಳೋತ್ಸವ

Mumbai News Desk

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಜೋಗೇಶ್ವರಿ ಸ್ಥಳೀಯ ಕಚೇರಿ ವತಿಯಿಂದ ಶ್ರೀ ಶನೇಶ್ವರ ಗ್ರಂಥ ಪಾರಾಯಣ

Mumbai News Desk