July 23, 2026
Mumbai News Kannada
ಪ್ರಕಟಣೆ

ಪದ್ಮಶಾಲಿ ಸಮಾಜ ಸೇವಾ ಸಂಘ,ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿ, ಮಹಿಳಾ ಬಳಗ – ಸೆ. 15ಕ್ಕೆ ವಾರ್ಷಿಕ ಮಹಾಸಭೆ.








ಮುಂಬೈ ಮಹಾನಗರದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಪದ್ಮಶಾಲಿ ಸಮಾಜ ಸೇವಾ ಸಂಘದ 88ನೇ ವಾರ್ಷಿಕ ಮಹಾಸಭೆ, ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿಯ 49ನೇ ವಾರ್ಷಿಕ ಮಹಾಸಭೆ ಮತ್ತು ಮಹಿಳಾ ಬಳಗದ 36ನೇ ವಾರ್ಷಿಕ ಮಹಾಸಭೆಯು ಸೆ. 15ರಂದು ಬೆಳ್ಳಿಗೆ 9 ಗಂಟೆಗೆ ಮುಲುಂಡ್ ಪಶ್ಚಿಮ ಪಂಡಿತ್ ಜವಾಹರಲಾಲ್ ನೆಹರು ಮಾರ್ಗ, ಅಪ್ನಾ ಬಜಾರ್ ನ ಮೇಲ್ಗಡೆಯ ಮಹಾರಾಷ್ಟ್ರ ಹಾಲ್ ನಲ್ಲಿ ನಡೆಯಲಿದೆ.
ಅಂದು ದಿನವಿಡೀ ನಡೆಯಲಿರುವ ಕಾರ್ಯಕ್ರಮದ ವಿವರ :
ಬೆಳಿಗ್ಗೆ 9:30ಕ್ಕೆ ಹಳದಿ ಕುಂಕುಮ, 9:45 ಕ್ಕೆ ಗುರು ಸ್ತೋತ್ರ ಮತ್ತು ಪ್ರಾರ್ಥನೆ, 9.50 ಕ್ಕೆ ಮಹಾಸಭೆ ಆರಂಭ.
ಬೆಳಿಗ್ಗೆ ಗಂಟೆ 11ಕ್ಕೆ ಸಮಾಜದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ/ ವಿದ್ಯಾರ್ಥಿವೇತನ ವಿತರಣೆ.
ಮಧ್ಯಾಹ್ನ 2 ಗಂಟೆಗೆ ವಾರ್ಷಿಕ ದಿನಾಚರಣೆ.
ಯುವ ಪ್ರತಿಭೆಗಳಿಗೆ ಮತ್ತು ಸಾಧಕರಿಗೆ ಪ್ರತಿಭಾ ಪುರಸ್ಕಾರ.
ಇ ಬಾರಿಯ ಪದ್ಮ ಪ್ರತಿಭಾ ಪುರಸ್ಕಾರವನ್ನು ಸ್ಫೂರ್ತಿ ವಿಶೇಷ ಶಾಲೆ ಮೂಡಬಿದ್ರೆ, ಇದರ ಸಂಸ್ಥಾಪಕ ಪ್ರಕಾಶ್ ಜೆ ಶೆಟ್ಟಿಗಾರ್ ಅವರಿಗೂ ಪದ್ಮಾ ಕಲಾ ತಪಸ್ವಿ ಪುರಸ್ಕಾರವನ್ನು ರಂಗ ನಟ, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ, ಇದರ ಅಧ್ಯಕ್ಷ ಡಾ. ಸುರೇಂದ್ರ ಕುಮಾರ್ ಹೆಗ್ಡೆ ಅವರಿಗೆ ಪ್ರಧಾನಿಸಲಾಗುವುದು ಹಾಗೂ ಸಮಿತಿಯ ಸದಸ್ಯರಿಗೆ ಮನ್ನಣೆ ಪ್ರಶಸ್ತಿ ನೀಡಲಾಗುವುದು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ ಲಘು ಉಪಹಾರ, ಮಧ್ಯಾಹ್ನ ಪ್ರೀತಿ ಭೋಜನ ಮತ್ತು ಸಂಜೆ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಗೌರವ ಕಾರ್ಯದರ್ಶಿ ಲೀಲಾಧರ ಬಿ ಶೆಟ್ಟಿಗಾರ್, ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿ ರಮೇಶ್ ಪಿ ಶೆಟ್ಟಿಗಾರ್, ಮಹಿಳಾ ವಿಭಾಗದ ಕಾರ್ಯದರ್ಶಿ ಉಷಾ ಎನ್ ಶೆಟ್ಟಿಗಾರ್ ವಿನಂತಿಸಿದ್ದಾರೆ.

.

.

.



Related posts

ಡಿ.3ರಂದು ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಷಷ್ಠಿಯಬ್ದ ಮಹೋತ್ಸವ.

Mumbai News Desk

ಜೂನ್ 16 : ಮುಂಬೈ ಫೋರ್ಟ್‌ನ ಶ್ರೀ ಶನಿಮಹಾತ್ಮ ತ್ರಿಭುವನೇಶ್ವರಿ ಸೇವಾ ಸಮಿತಿಯಿಂದ ಮೂರ್ತಿ ಪ್ರತಿಷ್ಠಾಪನಾ ದಿನ ಹಾಗೂ ಚೈತನ್ಯ ಬ್ರಹ್ಮ ಕಲಶೋತ್ಸವ

Mumbai News Desk

ಹೂಡೆಯಲ್ಲಿ ಜುಲೈ 19 ರಂದು ವೈಭವದ “ಆಟಿದ ಐಸಿರಿ ತುಳುವೆರೆ ಬದ್ಕ್‌”

Mumbai News Desk

ಕುಲಾಲ ಸಂಘ, ಮುಂಬಯಿ.  ನ 23: ಮಂಗಳೂರಿನ ಮಂಗಳ ದೇವಿ ಬಳಿ ಕುಲಾಲ ಭವನ ಲೋಕಾರ್ಪಣೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಜ.15 ಮತ್ತು 16ರಂದು ಪ್ರಥಮ ವರ್ಧಂತಿ ಉತ್ಸವ.

Mumbai News Desk

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥಾ 2025..

Mumbai News Desk