July 23, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಶನ್, ಮುಂಬಯಿ ವತಿಯಿಂದ ಡಾ. ಹರಿಶ್ಚಂದ್ರ ಸಾಲ್ಯಾನರಿಗೆ ಗೌರವಾರ್ಪಣೆ.







ಗುರುಗಳ ತತ್ವ ಸಂದೇಶದಂತೆ ಒಗ್ಗಟ್ಟಿನೊಂದಿಗೆ ನಿಸ್ವಾರ್ಥವಾಗಿ ಸಮಾಜಕ್ಕೆ ಸೇವೆಯನ್ನು ಸಲ್ಲಿಸೋಣ – ಡಾ.ಹರಿಶ್ಚಂದ್ರ ಸಾಲಿಯಾನ್

ಚಿತ್ರ, ವರದಿ :ಉಮೇಶ್ ಕೆ. ಅಂಚನ್

ಮುಂಬಯಿ ಮಹಾನಗರದ ಪ್ರತಿಷ್ಟಿತ ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಶನ್ ಜನಪರ ಕಾರ್ಯಗಳೊಂದಿಗೆ ಉತ್ತಮ ಸಾಮಾಜಿಕ, ಶೖಕ್ಷಣಿಕ, ವೖದ್ಯಕೀಯ ಹಾಗೂ ಇನ್ನಿತರ ಸೇವೆಗಳನ್ನು ಮಾಡುತ್ತಿದೆ.ಬಲಿಷ್ಠ ಸಮಿತಿಯನ್ನು ಹೊಂದಿರುವ ಹರೀಶ್ ಜಿ. ಅಮಿನ್ ರವರ ಸಮರ್ಥ ನಾಯಕತ್ವದಲ್ಲಿ ಅಸೋಸಿಯೇಷನ್ ಹಮ್ಮಿಕೊಂಡ ಹಲವಾರು ಸಮಾಜಪರ ಯೋಜನೆಗಳು ಯಶಸ್ವಿಯಾಗಿ ಸಾಕಾರಗೊಂಡಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಮುಂದೆ ನಿಮ್ಮಿಂದ ಸಮಾಜಕ್ಕೆ ಒಳ್ಳೆಯ ಸೇವೆ ಸಲ್ಲುವಂತಾಗಲಿ. ಗುರುಗಳ ತತ್ವ ಸಂದೇಶದಂತೆ ನಾವೆಲ್ಲರೂ ಒಗ್ಗಟ್ಟನ್ನು ಕಾಪಾಡಿಕೊಂಡು ನಿಸ್ವಾರ್ಥವಾಗಿ ಸಮಾಜದ ಉನ್ನತಿಗಾಗಿ ಶ್ರಮಿಸೋಣ ಎಂದು ಎಂದು ಇತ್ತೀಚೆಗೆ ಆರ್ಯಭಟ ಪ್ರಶಸ್ತಿ ಸ್ವೀಕರಿಸಿದ ಹಿರಿಯ ಸಮಾಜ ಸೇವಕ, ‘ಹೊಸ ಆಂಗಣ’ ಮಾಸಿಕ ಪತ್ರಿಕೆಯ ಸಂಪಾದಕ ಮುಲ್ಕಿ ಡಾ.ಹರಿಶ್ಚಂದ್ರ ಸಾಲ್ಯಾನ್ ಹೇಳಿದರು.
ಅವರು ಸೆ. 12ರಂದು ಸಂತಾಕ್ರೂಸ್ ಬಿಲ್ಲವ ಭವನದ ಕಿರುಸಭಾಗ್ರಹದಲ್ಲಿ ಅಸೋಸಿಯೇಶನಿನ ವತಿಯಿಂದ ನೀಡಿದ ಗೌರವಾರ್ಪಣೆ ಸ್ವೀಕರಿಸಿ ಮಾತನಾಡುತ್ತಿದ್ದರು.
ಅಸೋಸಿಯೇಶನಿನ ಅದ್ಯಕ್ಷರಾದ ಹರೀಶ್ ಜಿ. ಅಮೀನ್ ಮಾತನಾಡಿ ಅಸೋಸಿಯೇಶನ್ ಸಮಾಜದ ಪ್ರತಿಭಾವಂತರನ್ನು ಪ್ರೋತ್ಸಾಹಿಸಿ ಗೌರವಿಸುತ್ತಿದೆ. ಡಾ. ಸಾಲ್ಯಾನ್ ಅವರು ಓರ್ವ ಉತ್ತಮ ಸಂಘಟಕ. ಹಲವಾರು ಸಂಸ್ಥೆಗಳ ಮಾರ್ಗದರ್ಶಕರಾಗಿದ್ದು, ಇವರ ಸೇವೆಯನ್ನು ಗುರುತಿಸಿ ಹಲವಾರು ಸಂಘಸಂಸ್ಥೆಗಳು ಬಿರುದು ನೀಡಿ ಸನ್ಮಾನಿಸಿವೆ.ದಕ್ಷಣ ಕನ್ನಡ ರಾಜ್ಯೋತ್ಸವ ಹಾಗೂ ಆರ್ಯಭಟ ಪ್ರಶಸ್ತಿಗಳೂ ಲಭಿಸಿವೆ. ಇವರ ಹಲವಾರು ಉತ್ತಮ ಕೃತಿಗಳು ಲೋಕಾರ್ಪಣೆ ಗೊಂಡಿವೆ. ಇಂತಹ ಓರ್ವ ಸಜ್ಜನ ವಿದ್ವಾಂಸರನ್ನು ಗೌರವಿಸಲು ಸಂತೋಷವಾಗಿದೆ ಎಂದರು.
ಅಸೋಸಿಯೇಶನಿನ ಜತೆ ಕಾರ್ಯದರ್ಶಿ ಕೇಶವ ಕೋಟ್ಯಾನ್ ಡಾ. ಸಾಲ್ಯಾನ್ ರವರನ್ನು ಪರಿಚಯಿಸಿದರು. ಗೌ. ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಅಸೋಸಿಯೇಶನಿನ ಉಪಾದ್ಯಕ್ಷರುಗಳಾದ ಧರ್ಮಪಾಲ್ ಜಿ. ಅಂಚನ್, ಶಂಕರ್ ಡಿ. ಪೂಜಾರಿ, ಜತೆ ಕಾರ್ಯದರ್ಶಿ ರವಿ ಎಸ್.ಸನಿಲ್,ರವೀಂದ್ರ ಅಮೀನ್, ಡಾ. ರವಿರಾಜ್ ಸುವರ್ಣ, ಚಿತ್ರಾಪು ಕೆ. ಎಮ್. ಕೋಟ್ಯಾನ್, ರಾಮ ಅಮೀನ್,ನವೀನ್ಚಂದ್ರ ಅಮೀನ್, ಕೇಶವ ಪೂಜಾರಿ, ದೇವೇಂದ್ರ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

.

.



Related posts

ಬಿಲ್ಲವರ ಅಸೋಸಿಯೇಶನಿನ ಮೀರಾ ರೋಡ್ ಸ್ಥಳೀಯ ಕಚೇರಿಯ ವತಿಯಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk

ವಸಾಯಿ ತಾಲೂಕು ಮೊಗವೀರ ಸಂಘ (ರಿ.) ವತಿಯಿಂದ ಸಮುದಾಯ ಪಿಕ್ನಿಕ್ ಯಶಸ್ವಿಯಾಗಿ ಆಯೋಜನೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ರೋಷನ್ ಬಾಲಕೃಷ್ಣ ಮೂಲ್ಯ ಗೆ ಶೇ 84.60 ಅಂಕ.

Mumbai News Desk

ದಹಿಸರ್ ಶ್ರೀ ಕಾಶೀಮಠದಲ್ಲಿ ಕೊಂಕಣಿಯಲ್ಲಿ ಯಕ್ಷಗಾನ

Mumbai News Desk

ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕಿನ ಮೇಲೆ ನಿರ್ಬಂಧ ಹೇರಿದ ಆರ್ ಬಿ ಐ – ಆತಂಕದಲ್ಲಿ ಗ್ರಾಹಕರು

Mumbai News Desk