30.5 C
Mumbai
June 8, 2026
Mumbai News Kannada
ಮುಂಬಯಿ

ಬೋರಿವಲಿ ಐ.ಸಿ. ಕಾಲೋನಿ ಮಂಡಳಿಯ 33ನೇ ಗಣೇಶೋತ್ಸವ ಭಕ್ತಿ ಸಂಭ್ರಮದೊಂದಿಗೆ ಆಚರಣೆ






ಚಿತ್ರ,ವರದಿ : ದಿನೇಶ್ ಕುಲಾಲ್


ಮುಂಬಯಿ ಸೆ13. ಬೋರಿವಲಿ ಪಶ್ಚಿಮದ ಐಸಿ ಕೊಲೋನಿಯ ತುಳು ಕನ್ನಡಿಗರೊಂದಿಗೆ ಗಣೇಶ ಭಕ್ತರು 1992 ರಲ್ಲಿ ಸ್ಥಾಪಿಸಿರುವ ಐಸಿ ಕೊಲೋನಿ ಗಣೇಶೋತ್ಸವ ಮಂಡಲಿಯ ಗಣೇಶ ಉತ್ಸವ ಸೆಪ್ಟೆಂಬರ್ 7 ರಿಂದ 11 ವರಗೆ ಭಕ್ತಿ ಸಂಭ್ರಮದೊಂದಿಗೆ ನಡೆಯಿತು.ಐಸಿ ಕೊಲೋನಿಯ ಮುಖ್ಯರಸ್ತೆಯಲ್ಲಿ ನಿರ್ಮಿಸಿರುವ ಭವ್ಯ ಮಂಟಪದಲ್ಲಿ 33 ನೇ ವಾರ್ಷಿಕೋತ್ಸವದ ವೈಭವದ ಗಣೇಶ ಉತ್ಸವ ಸಪ್ಟಂಬರ್ 7ರಂದು ಗಣೇಶನ ಭವ್ಯ ಮೂರ್ತಿಯನ್ನು ಸ್ಥಾಪಿಸಿ, ಸೆಪ್ಟೆಂಬರ್ 11ರವರೆಗೆ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಜನೆ, ಹಳದಿ ಕುಂಕುಮ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. .ಪ್ರತಿದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಗಣೇಶನ ದರ್ಶನವನ್ನು ಪಡೆದರು. ನಗರದ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ರಾಜಕೀಯ ಮುಖಂಡರು, ಧಾರ್ಮಿಕ ಸೇವಾಕರ್ತರು ಮಂಡಳಿಯ ಮಹಾಪ್ರಸಾದವನ್ನು, ಗೌರವವನ್ನು ಸ್ವೀಕರಿಸಿದರು. ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ. ಮತ್ತು ನಿರ್ದೇಶಕ ಮಂಡಳಿ, ದೇವರ ದರ್ಶನವನ್ನು ಪಡೆದು ಗೌರವವನ್ನು ಸ್ವೀಕರಿಸಿದರು. ಪಾಲ್ಗೊಂಡ ಎಲ್ಲರನ್ನು ಐ.ಸಿ. ಕಾಲೋನಿ ಸರ್ವಜನಿಕ ಗಣೇಶೋತ್ಸವ ಮಂಡಲದ ಅಧ್ಯಕ್ಷರು ಹರೀಶ್ ಸುವರ್ಣ.ಉಪಾಧ್ಯಕ್ಷರುಗಳದ ರಾಜು ಪೂಜಾರಿ, ಸಿದ್ದು ಗಾಯಕವಾಡ, ರಾಜೇಂದ್ರ ಇಂದುಲ್ಕರ್, ಕಾರ್ಯದರ್ಶಿ, ಶಂಕರ ಪೂಜಾರಿ, ಕೋಶಾಧಿಕಾರಿ ಶ್ರೀಕಾಂತ್ ಹೆಜಮಾಡಿ. ಮಹಿಳಾ ಸದಸ್ಯರು ಯುವ ಸದಸ್ಯರು ಗೌರವಿಸಿದರು.



Related posts

ಟೆಂಡರ್ ಫ್ರೆಶ್ ಐಸ್ಕ್ರೀಂಮ್ ಗೆ ಟೈಮ್ಸ್ ಆಫ್ ಇಂಡಿಯಾ ಪ್ರಶಸ್ತಿ.

Mumbai News Desk

ಮೀರಾಬಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿಯವರು ವಾರ್ಡ್ 3ರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.

Mumbai News Desk

ಮುಂಬಯಿ ನ್ಯೂಸ್ ವೀಕ್ಷಕರ /ಓದುಗರ ಮನೆ, ಮನೆ ಗಣಪತಿ

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ ಸಂಪನ್ನ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರೇಯಾ ಯಾದವ್ ದೇವಾಡಿಗ ಗೆ ಶೇ.90 ಅಂಕ.

Mumbai News Desk

ಕುಲಾಲ ಸಂಘ ಮುಂಬಯಿ ; 93ನೇ ವಾರ್ಷಿಕ ಮಹಾಸಭೆ

Mumbai News Desk