25 C
Mumbai
March 7, 2026
Mumbai News Kannada
ಸುದ್ದಿ

ಮಹಾರಾಷ್ಟ್ರದಲ್ಲಿ ಈದ್ ಮಿಲಾದ್ ರಜೆ ಸೆ.16 ರ ಬದಲು ಸೆ. 18ಕ್ಕೆ.






ಮಹಾರಾಷ್ಟ್ರ ಸರ್ಕಾರವು ಅಧಿಕೃತ ಈದ್ -ಎ -ಮಿಲಾದ್ ರಜೆಯನ್ನು ಸೆಪ್ಟಂಬರ್ 16ರ (ಸೋಮವಾರ )ಬದಲಿಗೆ ಸೆಪ್ಟೆಂಬರ್ 18ಕ್ಕೆ(ಬುಧವಾರ )ಮರು ನಿಗದಿಪಡಿಸಿದೆ. ಗಣೇಶ್ ಹಬ್ಬದ ಕೊನೆಯ ದಿನವಾದ ಅನಂತ ಚತುರ್ದಶಿ ಸೆಪ್ಟೆಂಬರ್ 17ರಂದು ಇರುವುದರಿಂದ ಸ್ಥಳೀಯ ಮುಸ್ಲಿಂ ಸಮುದಾಯವು ತನ್ನ ಈದ್ ಮೆರವಣಿಗೆಯನ್ನು ಸೆಪ್ಟಂಬರ್ 16ರ ಬದಲಿಗೆ ಸೆಪ್ಟೆಂಬರ್ 18ರಂದು ನಡೆಸಲು ನಿರ್ಧರಿಸಿದೆ.
ಗಣೇಶ ವಿಸರ್ಜನಾ ಸಮಾರಂಭಗಳೊಂದಿಗೆ ಘರ್ಷಣೆಯನ್ನು ತಪ್ಪಿಸಲು ಸೆಪ್ಟಂಬರ್ 18ರಂದು ಈದ್ ಮೆರವಣಿಗೆಯನ್ನು ನಡೆಸಲು ಯೋಜಿಸಿದ ಮುಸ್ಲಿಂ ಶಾಸಕರು ಮತ್ತು ಸಂಘಟನೆಗಳ ಮನವಿಯನ್ನು ಅನುಸರಿಸಿ ಸರಕಾರ ಈ ನಿರ್ದಾರ ತೆಗೆದುಗೊಂಡಿದೆ.
ಮಹಾರಾಷ್ಟ್ರ ಸರ್ಕಾರವು ಸೂಚಿಸಿದ 24 ಸಾರ್ವಜನಿಕ ರಜಾ ದಿನಗಳಲ್ಲಿ ಈದ್ ಮಿಲಾದ್ ರಜೆಯನ್ನು ಸೋಮವಾರ ಸೆಪ್ಟೆಂಬರ್ 16ರ 2024 ರಂದು ಸೂಚಿಸಲಾಗಿತ್ತು. 2024ರ ಸೆಪ್ಟೆಂಬರ್ 17ರಂದು ಹಿಂದುಗಳ ಹಬ್ಬವಾದ ಅನಂತ ಚತುರ್ದಶಿ ಇರುವುದರಿಂದ ಎರಡು ಸಮುದಾಯಗಳ ನಡುವೆ ಶಾಂತಿ ಮತ್ತು ಸಾಮಾಜಿಕ ಸೌಹಾರ್ದತೆ ಕಾಪಾಡಲು ಮುಸ್ಲಿಂ ಸಮುದಾಯದ ವತಿಯಿಂದ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಆದ್ದರಿಂದ ಈದ್ ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 16ರ ಬದಲಿಗೆ , ಸೆಪ್ಟೆಂಬರ್ 18ರ ಬುಧವಾರದಂದು ಘೋಷಿಸಲಾಗಿದೆ.

.

.



Related posts

ಯುಎಇ ಬಂಟ್ಸ್‌ನಿಂದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಸುಳ್ಯದಲ್ಲಿ  ಐಕಳ ಹರೀಶ್ ಶೆಟ್ಟಿ ಯವರಿಂದ ಬಂಟರ ಸಮಾವೇಶ ಉದ್ಘಾಟನೆ:*

Mumbai News Desk

ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ ಆಕಾಶ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk