30.9 C
Mumbai
June 8, 2026
Mumbai News Kannada
ಸುದ್ದಿ

ಮಹಾರಾಷ್ಟ್ರದಲ್ಲಿ ಈದ್ ಮಿಲಾದ್ ರಜೆ ಸೆ.16 ರ ಬದಲು ಸೆ. 18ಕ್ಕೆ.






ಮಹಾರಾಷ್ಟ್ರ ಸರ್ಕಾರವು ಅಧಿಕೃತ ಈದ್ -ಎ -ಮಿಲಾದ್ ರಜೆಯನ್ನು ಸೆಪ್ಟಂಬರ್ 16ರ (ಸೋಮವಾರ )ಬದಲಿಗೆ ಸೆಪ್ಟೆಂಬರ್ 18ಕ್ಕೆ(ಬುಧವಾರ )ಮರು ನಿಗದಿಪಡಿಸಿದೆ. ಗಣೇಶ್ ಹಬ್ಬದ ಕೊನೆಯ ದಿನವಾದ ಅನಂತ ಚತುರ್ದಶಿ ಸೆಪ್ಟೆಂಬರ್ 17ರಂದು ಇರುವುದರಿಂದ ಸ್ಥಳೀಯ ಮುಸ್ಲಿಂ ಸಮುದಾಯವು ತನ್ನ ಈದ್ ಮೆರವಣಿಗೆಯನ್ನು ಸೆಪ್ಟಂಬರ್ 16ರ ಬದಲಿಗೆ ಸೆಪ್ಟೆಂಬರ್ 18ರಂದು ನಡೆಸಲು ನಿರ್ಧರಿಸಿದೆ.
ಗಣೇಶ ವಿಸರ್ಜನಾ ಸಮಾರಂಭಗಳೊಂದಿಗೆ ಘರ್ಷಣೆಯನ್ನು ತಪ್ಪಿಸಲು ಸೆಪ್ಟಂಬರ್ 18ರಂದು ಈದ್ ಮೆರವಣಿಗೆಯನ್ನು ನಡೆಸಲು ಯೋಜಿಸಿದ ಮುಸ್ಲಿಂ ಶಾಸಕರು ಮತ್ತು ಸಂಘಟನೆಗಳ ಮನವಿಯನ್ನು ಅನುಸರಿಸಿ ಸರಕಾರ ಈ ನಿರ್ದಾರ ತೆಗೆದುಗೊಂಡಿದೆ.
ಮಹಾರಾಷ್ಟ್ರ ಸರ್ಕಾರವು ಸೂಚಿಸಿದ 24 ಸಾರ್ವಜನಿಕ ರಜಾ ದಿನಗಳಲ್ಲಿ ಈದ್ ಮಿಲಾದ್ ರಜೆಯನ್ನು ಸೋಮವಾರ ಸೆಪ್ಟೆಂಬರ್ 16ರ 2024 ರಂದು ಸೂಚಿಸಲಾಗಿತ್ತು. 2024ರ ಸೆಪ್ಟೆಂಬರ್ 17ರಂದು ಹಿಂದುಗಳ ಹಬ್ಬವಾದ ಅನಂತ ಚತುರ್ದಶಿ ಇರುವುದರಿಂದ ಎರಡು ಸಮುದಾಯಗಳ ನಡುವೆ ಶಾಂತಿ ಮತ್ತು ಸಾಮಾಜಿಕ ಸೌಹಾರ್ದತೆ ಕಾಪಾಡಲು ಮುಸ್ಲಿಂ ಸಮುದಾಯದ ವತಿಯಿಂದ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಆದ್ದರಿಂದ ಈದ್ ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 16ರ ಬದಲಿಗೆ , ಸೆಪ್ಟೆಂಬರ್ 18ರ ಬುಧವಾರದಂದು ಘೋಷಿಸಲಾಗಿದೆ.

.

.



Related posts

ಮುಂಬೈ : ಪ್ರವೀಣ್ ಭಟ್ ಅವರಿಗೆ ಪಿತೃ ವಿಯೋಗ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

ಬೈಂದೂರು: ಪ್ರವಾಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ಇದರ ಜಂಟಿ ಆಶ್ರಯದಲ್ಲಿ ಸ್ಥನ್ಯಪಾನ ಶಿಬಿರಕ್ಕೆ ಚಾಲನೆ.

Mumbai News Desk

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk