July 23, 2026
Mumbai News Kannada
ಪ್ರಕಟಣೆ

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಸೆ. 29 ರಂದು 36ನೇ ವಾರ್ಷಿಕ ಮಹಾಸಭೆ







ಮುಂಬೈ.ಸೆ. 16: ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿರುವ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಸರ್ವ ಸದಸ್ಯರ 36 ನೇ ವರ್ಷದ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 29 ರವಿವಾರದಂದು ಪೂರ್ವಾಹ್ನ ಗಂಟೆ 10-30 ಕ್ಕೆ ಸರಿಯಾಗಿ ಉತ್ಕರ್ಷ ಮಂಡಲ್ ಸಭಾಗೃಹ ಪ್ರಥಮ ಮಹಡಿ ಸಹಯೋಗ ಮಂದಿರ, ಸಹಯೋಗ ಮಂದಿರ ಮಾರ್ಗ, ನೌಪಾಡಾ, ಥಾಣೆ (ಪಶ್ಚಿಮ) ಇಲ್ಲಿ ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಅಂದು ಗತ ಮಹಾಸಭೆಯ ವರದಿ ವಾಚನ ಮತ್ತು ಅಂಗೀಕಾರ ಹಾಗೂ ಆಡಳಿತ ಮಂಡಳಿ ಒಪ್ಪಿಸುವ 2023 – 24ರ ಅವಧಿಯ ವಾರ್ಷಿಕ ವರದಿ ಮತ್ತು ಲೆಕ್ಕ ಪರಿಶೋಧಕರಿಂದ ಪರಿಶೀಲಿಸಲ್ಪಟ್ಟ ಲೆಕ್ಕ ಪತ್ರಗಳ ಅಂಗೀಕರಿಸುವುದಲ್ಲದೆ ನೂತನ ಲೆಕ್ಕ ಪರಿಶೋಧಕರುಗಳ ನೇಮಕ, 2024 – 26ನೇ ಸಾಲಿನ ಆಡಳಿತ ಮಂಡಳಿಗೆ 16 ಸದಸ್ಯರ ಆಯ್ಕೆ, ಫೋರ್ಟ್ ನಲ್ಲಿ ಇರುವ ಕಾರ್ಯಾಲಯವನ್ನು ದುರಸ್ಥಿ ಅಥವಾ ಮಾರಾಟ ಮಾಡುವ ಕುರಿತು ಹಾಗೂ ಸದಸ್ಯರ ಸಲಹೆ ಸೂಚನೆ ಸಭಾಧ್ಯಕ್ಷರ ಭಾಷಣ ಸೇರಿದಂತೆ ಮಹಾಸಭೆಯ ಕಾರ್ಯಕಲಾಪಗಳು ಜರಗಲಿವೆ ಎಂದು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ ತಿಳಿಸಿದ್ದಾರೆ.
ಮುಂಬಯಿ ಮಹಾನಗರ ಮತ್ತು ಉಪನಗರಗಳ ಶಾಲಾ-ಕಾಲೇಜುಗಳಲ್ಲಿ ಅಥವಾ ಯಾವುದೇ ವಿಶ್ವ ವಿದ್ಯಾಲಯಗಳಲ್ಲಿ 2023 – 24 ನೇ ಶೈಕ್ಷಣಿಕ ವರ್ಷಾಂತಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪರಸ್ಕಾರ ಮತ್ತು ಅಸಹಾಯಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುವ ನಿಟ್ಟಿನಲ್ಲಿ ಅರ್ಜಿ ಅಹ್ವಾನಿಸಲಾಗಿದ್ದು ಅದಕ್ಕಾಗಿ ಅರ್ಹ ವಿದ್ಯಾರ್ಥಿಗಳು ಪ್ರತಿಭಾ ಪರಸ್ಕಾರ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 29 ಅಂತಿಮ ದಿನವಾಗಿರುತ್ತದೆ. ಈ ಕುರಿತು ವಿವರವಾದ ಮಾಹಿತಿ ಒಳಗೊಂಡ ಸಂಘದ ವಾರ್ಷಿಕ ವರದಿಯನ್ನು ಸದಸ್ಯರಿಗೆ ಈಗಾಗಲೇ ಅಂಚೆಯ ಮುಖಾಂತರ ಕಳುಹಿಸಲಾಗಿದ್ದು ವರದಿಯ ಪ್ರತಿ ಸಿಗದೆ ಇರುವ ಸದಸ್ಯರು ಮತ್ತು ವಿಳಾಸ ಬದಲಾಯಿಸಿದ ಸದಸ್ಯರು ಸಂಘದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದೆಂದು ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ಮತ್ತು ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್ ತಿಳಿಸಿದ್ದಾರೆ.
ಸದಸ್ಯರೆಲ್ಲರೂ ಸಕಾಲದಲ್ಲಿ ಆಗಮಿಸಿ ಮಹಾಸಭೆಯಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡುವುದರೊಂದಿಗೆ ಮಹಾಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಗೌರವಾಧ್ಯಕ್ಷರಾದ ಸುರೇಶ ಎಸ್. ಪೂಜಾರಿ, ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ, ಉಪಾಧ್ಯಕ್ಷರುಗಳಾದ ನರಸಿಂಹ ಎಂ. ಬಿಲ್ಲವ, ಆನಂದ ಕೆ. ಪೂಜಾರಿ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ, ಗೌರವ ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್, ಜೊತೆ ಕಾರ್ಯದರ್ಶಿಗಳಾದ ಸುಶೀಲಾ ಆರ್. ಪೂಜಾರಿ, ಹರೀಶ ಎನ್. ಪೂಜಾರಿ, ಜೊತೆ ಕೋಶಾಧಿಕಾರಿಗಳಾದ ರಮೇಶ ಜಿ. ಬಿಲ್ಲವ, ರತ್ನಾಕರ ಎಸ್. ಪೂಜಾರಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಈ ಮೂಲಕ ವಿನಂತಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಅಥವಾ ಸದಸ್ಯರನ್ನು (9869071413/9867811733/9820718785)ಸಂಪರ್ಕಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

.

.

.



Related posts

ದಹಿಸರ್ ಪೂರ್ವ. ರಾವಲ್ಪಾಡ   ಶ್ರೀ ದುರ್ಗಾಪರಮೇಶ್ವರಿ -ಶನೀಶ್ವರ ದೇವಸ್ಥಾನ, ಜೂ 6 ರಂದು ಶ್ರೀ ಶನಿ ಜಯಂತಿ ಆಚರಣೆ.

Mumbai News Desk

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಬಾಬಾ ದರ್ಶನದಲ್ಲಿ ತಾತ್ಕಾಲಿಕ ಬದಲಾವಣೆ: ವಿಗ್ರಹ ನವೀಕರಣ ಹಿನ್ನೆಲೆ ಏಪ್ರಿಲ್ 27 ರಿಂದ ದರ್ಶನ ಸ್ಥಗಿತ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk