September 6, 2026
Mumbai News Kannada
ಸುದ್ದಿ

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ಸೋಮಣ್ಣ






ಜನರಿಗೆ ಒದಗಿಸುವ ಸೇವೆಗಳನ್ನು ಸುಧಾರಿಸಲು ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಚಿಂತನೆ ನಡೆಸಿದೆ ಎಂದು ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಸೋಮವಾರ ರಾತ್ರಿ ಪುಣೆ – ಹುಬ್ಬಳ್ಳಿ ನಡುವಿನ ಒಂದೇ ಭಾರತ್ ರೈಲನ್ನು ಸ್ವಾಗತಿಸಲು ಇಲ್ಲಿನ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರತನಕವಿದ್ದು, ಕರ್ನಾಟಕ ರಾಜ್ಯ ಒಂದರಲ್ಲಿ ಒಟ್ಟು 742 ಕಿ. ಮೀ ಜಾಗ ಆವರಿಸಿದೆ. ಪ್ರಯಾಣಿಕರಿಗೆ ಹೆಚ್ಚು ಮತ್ತು ಉತ್ತಮ ಸೇವೆಗಳ ಅಗತ್ಯವಿದೆ ಹೀಗಾಗಿ ಭಾರತೀಯ ರೈಲ್ವೆಯೊಂದಿಗೆ ವಿಲೀನವನ್ನು ಪರಿಗಣಿಸಲಾಗುತ್ತಿದೆ ಎಂದು ಸೋಮಣ್ಣ ಒತ್ತಿ ಹೇಳಿದರು.ನಾವು ಕರ್ನಾಟಕ ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ, ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿದ ನಂತರ ವಿಲೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.
ಕೊಂಕಣ ರೈಲ್ವೆ 1993ರಲ್ಲಿ ಮುಂಬೈಯಿಂದ ಮಂಗಳೂರಿಗೆ ರೈಲ್ವೆ ಸೇವೆ ಆರಂಭಿಸಿದ್ದರೂ, ಇಷ್ಟರ ತನಕ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ವಿಫಲವಾಗಿದೆ.
ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಉತ್ತಮ ಸೇವೆ, ಸೌಲಭ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಸಿಗಬಹುದು.

.

.

.



Related posts

ಓಟಗಾರ ಬಾಕಿಯಾದರೂ ಬಹುಮಾನ ಗೆದ್ದ ಹೊಸ್ಮಾರು ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟರ ಕೋಣಗಳು. ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಗುರುಪುರ ಕಂಬಳ.

Mumbai News Desk

ಯುವ ಸಿಂಚನ ಪತ್ರಿಕೆಯ ಸಂಪಾದಕ, ಎನ್ ಎಸ್ ಸಿಡಿಎಫ್ ನ ಪ್ರಧಾನ ಕಾರ್ಯದರ್ಶಿ ದಿನಕರ್ ಡಿ. ಬಂಗೇರ ಅವರಿಗೆ ಮಾತೃ ವಿಯೋಗ.

Mumbai News Desk

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ವಿಧಿವಶ.

Mumbai News Desk

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

Mumbai News Desk