30 C
Mumbai
April 24, 2026
Mumbai News Kannada
ಸುದ್ದಿ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ





ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬವು (125ವರ್ಷ ) ನ. 17 ಮತ್ತು 18ರಂದು ವಕೀಲರ ಸಂಘದ ಆಯೋಜನೆಯಲ್ಲಿ ನಡೆಯಲಿದೆ. ಉಡುಪಿ ನ್ಯಾಯಾಲಯದ ಆವರಣದಲ್ಲಿ ನಡೆಯಲಿರುವ ಶತಮಾನೋತ್ತರ ಬೆಳ್ಳಿ ಹಬ್ಬ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಇಂದು (ಸೆ. 25) ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷ ರೇನೋಲ್ಡ್ ಪ್ರವೀಣ್ ಕುಮಾರ್, ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, , ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆರೂರು ಸುಕೇಶ್ ಶೆಟ್ಟಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ ನಾಗರಾಜ್, ಮತ್ತು ಹಿರಿಯ ನ್ಯಾಯವಾದಿ ಆನಂದ ಮಡಿವಾಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

.



Related posts

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಅಂಚೆ ಜನ ಸಂಪರ್ಕ ಅಭಿಯಾನ: ಕಂಬದ ಕೋಣೆ- ಕಾಲ್ತೊಡು

Mumbai News Desk

ಜೆ. ಬಿ. ನಗರ : ಸುನಂದಾ ಕೇಶವ ಶ್ರೀಯಾನ್ ನಿಧನ

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk