July 23, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :







ಡೊಂಬಿವಲಿ – ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 2 ನೇ ತಾರೀಕು ಬುಧವಾರ ಬೆಳಿಗ್ಗೆ 9 ರಿಂದ ಮದ್ಯಾಹ್ನ 2 ಗಂಟೆಯ ತನಕ ಶಿಬಿರ ನಡೆಯಲಿದೆ. ಡೊಂಬಿವಲಿಯ ಪ್ರಸಿದ್ದ ವೈದ್ಯರಾದ ಡಾಕ್ಟರ್ ಅನಘಾ ಹೇರೂರ್ ಅವರ ತಂಡದಿಂದ ಉಚಿತ ನೇತ್ರ ತಪಾಸಣೆ ನಡೆಯಲಿದೆ. ನೇತ್ರ ಪರೀಕ್ಷೆ ಮಾಡಿಸುವವರು ಬೆಳಿಗ್ಗೆ 9 ಗಂಟೆಯಿಂದ ಶಿಬಿರ ದಲ್ಲಿ ಟೋಕನ್ ಪಡೆದುಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಮತ್ತು ಡಾಕ್ಟರ್ ಅನಿಲ್ ಹೇರೂರ್ ತಂಡದವರಿಂದ ಮಹಿಳೆಯರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆಯು ನಡೆಯಲಿದೆ. ಮೊದಲು ಬರುವ 30 ರಿಂದ 35 ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆಗೆ ಅವಕಾಶವಿದೆ. ಸಮಾಜ ಬಾಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಯುತ ರಾಜು ಮೊಗವೀರ ತಗ್ಗರ್ಸೆ, ಕಾರ್ಯದರ್ಶಿ ಶ್ರೀಯುತ ಸಂತೋಷ ಪುತ್ರನ್ ಮತ್ತು ಸಮಿತಿ ಸದಸ್ಯರು ಹಾಗೂ ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆಯ ಕಾರ್ಯಾಧ್ಯಕ್ಷರಾದ ಶ್ರೀಯುತ ಶೇಖರ್ ಮೆಂಡನ್, ಕಾರ್ಯದರ್ಶಿ ಶ್ರೀಯುತ ಉಮೇಶ್ ಮೆಂಡನ್ ಮತ್ತು ಶಾಖೆಯ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಸ್ಥಳ – ಮೊಗವೀರ ವ್ಯವಸ್ತಾಪಕ ಮಂಡಳಿ. ವೇದ ಬ್ರಹ್ಮ,
2 ನೇ ಮಳಿಗೆ, M.G ರೋಡ್, ಲಿಜತ್ ಪಾಪಡ್ ಮೇಲುಗಡೆ,
ಡೊಂಬಿವಲಿ ಪಶ್ಚಿಮ.



Related posts

ನ. 24 ರಂದು ಶ್ರೀ ಮಹಾದೇವಿ ಮಂತ್ರದೇವತೆ ಸನ್ನಿಧಿ (ರಿ.) ಮುಲುಂಡ್ ಪಶ್ಚಿಮ – 2ನೇ ವರ್ಷದ ಗಗ್ಗರ ಸೇವೆ

Mumbai News Desk

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ

Mumbai News Desk

  ನಾಳೆ  (ಡಿ. 25) ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಜಗಜ್ಯೋತಿ ಕಲಾವೃಂದದಿಂದ ಮಹಿಳೆಯರಿಗಾಗಿ ಅಖಿಲ ಭಾರತ ಮಟ್ಟದ ಕಥಾ ಮತ್ತು ಕವಿತಾ ಪ್ರಶಸ್ತಿ ಸ್ಪರ್ಧೆ ಆಹ್ವಾನ

Mumbai News Desk

ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬೈ ಬಿಲ್ಲವರು : ಸೆ. 27ರಂದು, ಕಾಂದಿವಲಿಯಲ್ಲಿ ಶನೀಶ್ವರ ಸಂಪೂರ್ಣ ಗ್ರಂಥ ಪಾರಾಯಣ, ಬ್ರಹ್ಮಶ್ರೀ ನಾರಾಯಣ ಗುರು ಪೂಜೆ

Mumbai News Desk

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk