September 6, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :





ಡೊಂಬಿವಲಿ – ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 2 ನೇ ತಾರೀಕು ಬುಧವಾರ ಬೆಳಿಗ್ಗೆ 9 ರಿಂದ ಮದ್ಯಾಹ್ನ 2 ಗಂಟೆಯ ತನಕ ಶಿಬಿರ ನಡೆಯಲಿದೆ. ಡೊಂಬಿವಲಿಯ ಪ್ರಸಿದ್ದ ವೈದ್ಯರಾದ ಡಾಕ್ಟರ್ ಅನಘಾ ಹೇರೂರ್ ಅವರ ತಂಡದಿಂದ ಉಚಿತ ನೇತ್ರ ತಪಾಸಣೆ ನಡೆಯಲಿದೆ. ನೇತ್ರ ಪರೀಕ್ಷೆ ಮಾಡಿಸುವವರು ಬೆಳಿಗ್ಗೆ 9 ಗಂಟೆಯಿಂದ ಶಿಬಿರ ದಲ್ಲಿ ಟೋಕನ್ ಪಡೆದುಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಮತ್ತು ಡಾಕ್ಟರ್ ಅನಿಲ್ ಹೇರೂರ್ ತಂಡದವರಿಂದ ಮಹಿಳೆಯರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆಯು ನಡೆಯಲಿದೆ. ಮೊದಲು ಬರುವ 30 ರಿಂದ 35 ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆಗೆ ಅವಕಾಶವಿದೆ. ಸಮಾಜ ಬಾಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಯುತ ರಾಜು ಮೊಗವೀರ ತಗ್ಗರ್ಸೆ, ಕಾರ್ಯದರ್ಶಿ ಶ್ರೀಯುತ ಸಂತೋಷ ಪುತ್ರನ್ ಮತ್ತು ಸಮಿತಿ ಸದಸ್ಯರು ಹಾಗೂ ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆಯ ಕಾರ್ಯಾಧ್ಯಕ್ಷರಾದ ಶ್ರೀಯುತ ಶೇಖರ್ ಮೆಂಡನ್, ಕಾರ್ಯದರ್ಶಿ ಶ್ರೀಯುತ ಉಮೇಶ್ ಮೆಂಡನ್ ಮತ್ತು ಶಾಖೆಯ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಸ್ಥಳ – ಮೊಗವೀರ ವ್ಯವಸ್ತಾಪಕ ಮಂಡಳಿ. ವೇದ ಬ್ರಹ್ಮ,
2 ನೇ ಮಳಿಗೆ, M.G ರೋಡ್, ಲಿಜತ್ ಪಾಪಡ್ ಮೇಲುಗಡೆ,
ಡೊಂಬಿವಲಿ ಪಶ್ಚಿಮ.



Related posts

ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು : ಮೇ. 8ರಂದು “ಕಚ್ಚೂರು ಶ್ರೀ ನಾಗೇಶ್ವರ ಉತ್ಸವ”

Mumbai News Desk

ಡೊಂಬಿವಲಿ: ಮಾರ್ಚ್ 17 (ನಾಳೆ) ಅನುಜಾ ಮಹಿಳಾ ಸಂಸ್ಥೆಯ 45ನೇ ವಾರ್ಷಿಕೋತ್ಸವ

Mumbai News Desk

ಫೆ.1 ರಿಂದ 3 ರ ವರಗೆ ಶ್ರೀ ಶನೀಶ್ವರ ಮಂದಿರ (ರಿ), ಭಟ್ಟಿಪಾಡದ 40ನೇ ವಾರ್ಷಿಕ ಮಹಾಪೂಜೆ.

Mumbai News Desk

ಆ. 10 ರಂದು ಬಂಟರ ಸಂಘ ಮುಂಬಯಿ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಮೇ 10ರಂದು ಬಾಲಭೋಜನಾಲಯ ಮತ್ತು ಧ್ಯಾನ ಮಂದಿರ ಲೋಕಾರ್ಪಣೆ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ: ಜು 28ರಂದು ಆಶಾಡ ಹಬ್ಬ ಆಚರಣೆ,

Mumbai News Desk