30.9 C
Mumbai
June 8, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :





ಡೊಂಬಿವಲಿ – ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 2 ನೇ ತಾರೀಕು ಬುಧವಾರ ಬೆಳಿಗ್ಗೆ 9 ರಿಂದ ಮದ್ಯಾಹ್ನ 2 ಗಂಟೆಯ ತನಕ ಶಿಬಿರ ನಡೆಯಲಿದೆ. ಡೊಂಬಿವಲಿಯ ಪ್ರಸಿದ್ದ ವೈದ್ಯರಾದ ಡಾಕ್ಟರ್ ಅನಘಾ ಹೇರೂರ್ ಅವರ ತಂಡದಿಂದ ಉಚಿತ ನೇತ್ರ ತಪಾಸಣೆ ನಡೆಯಲಿದೆ. ನೇತ್ರ ಪರೀಕ್ಷೆ ಮಾಡಿಸುವವರು ಬೆಳಿಗ್ಗೆ 9 ಗಂಟೆಯಿಂದ ಶಿಬಿರ ದಲ್ಲಿ ಟೋಕನ್ ಪಡೆದುಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಮತ್ತು ಡಾಕ್ಟರ್ ಅನಿಲ್ ಹೇರೂರ್ ತಂಡದವರಿಂದ ಮಹಿಳೆಯರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆಯು ನಡೆಯಲಿದೆ. ಮೊದಲು ಬರುವ 30 ರಿಂದ 35 ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆಗೆ ಅವಕಾಶವಿದೆ. ಸಮಾಜ ಬಾಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಯುತ ರಾಜು ಮೊಗವೀರ ತಗ್ಗರ್ಸೆ, ಕಾರ್ಯದರ್ಶಿ ಶ್ರೀಯುತ ಸಂತೋಷ ಪುತ್ರನ್ ಮತ್ತು ಸಮಿತಿ ಸದಸ್ಯರು ಹಾಗೂ ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆಯ ಕಾರ್ಯಾಧ್ಯಕ್ಷರಾದ ಶ್ರೀಯುತ ಶೇಖರ್ ಮೆಂಡನ್, ಕಾರ್ಯದರ್ಶಿ ಶ್ರೀಯುತ ಉಮೇಶ್ ಮೆಂಡನ್ ಮತ್ತು ಶಾಖೆಯ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಸ್ಥಳ – ಮೊಗವೀರ ವ್ಯವಸ್ತಾಪಕ ಮಂಡಳಿ. ವೇದ ಬ್ರಹ್ಮ,
2 ನೇ ಮಳಿಗೆ, M.G ರೋಡ್, ಲಿಜತ್ ಪಾಪಡ್ ಮೇಲುಗಡೆ,
ಡೊಂಬಿವಲಿ ಪಶ್ಚಿಮ.



Related posts

  ನಾಳೆ  (ಡಿ. 25) ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ,

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

ಜ. 26 ; ಜೈ ಶ್ರೀ ವಿಶ್ವಕರ್ಮ ಭಜನಾ ಮಂಡಳಿ ಯ 15ನೇ ವಾರ್ಷಿಕೋತ್ಸವ

Mumbai News Desk

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ

Mumbai News Desk