32 C
Mumbai
April 24, 2026
Mumbai News Kannada
ಮುಂಬಯಿ

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.






ಶಿವಸೇನೆ (ಯುಬಿಟಿ)ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಮಾನವನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು ಅವರಿಗೆ 15 ದಿನಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ, ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾರತೀಯ ಜನತಾ ಪಕ್ಷದ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಪರವಾಗಿ ರಾವುತ್ ವಿರುದ್ಧ ಪ್ರಕರಣ ದಾಖಲಾಗಿದ್ದು ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ರಾಜ್ಯಸಭಾ ಸದಸ್ಯ ರಾವುತ್ ಅವರನ್ನು ಭಾರತೀಯ ದಂಡ ಸಹಿತೆಯ ಸೆಕ್ಷನ್ 500( ಮಾನನಷ್ಟ ಶಿಕ್ಷೆ )ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ಕಿರಿಟ್ ಸೋಮಯ್ಯ ಅವರ ಪತ್ನಿ, ಮೇಧಾ ಸೋಮಯ್ಯ ಅವರು ವಕೀಲ ವಿವೇಕಾನಂದ ಗುಪ್ತ ಮೂಲಕ ಸಲ್ಲಿಸಿದ ದೂರಿನಲ್ಲಿ ರಾವುತ್ ತಮ್ಮ ಮತ್ತು ತಮ್ಮ ಪತಿ ವಿರುದ್ಧ ಆಧಾರ ರಹಿತ ಮತ್ತು ಸಂಪೂರ್ಣ ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.ಅವರ ದೂರನ್ನು ಪರಿಶೀಲನೆ ಮಾಡಿದ ನ್ಯಾಯಾಲಯ ರಾವುತ್ ಅವರನ್ನು ದೋಷಿ ಎಂದು ಘೋಷಿಸಿ ಇಂದು (ಸೆ. 26) ಆದೇಶ ಹೊರಡಿಸಿದೆ.



Related posts

ಮೊಗವೀರ ಸಮಾಜದ ಯುವ ನೇತಾರ ಸಂತೋಷ್ ಪುತ್ರನ್ ಅವರ ಮಾತೃಶ್ರೀ ಸೀತಾ ಕೃಷ್ಣ ಪುತ್ರನ್ ರಿಗೆ ನುಡಿ ನಮನ. 

Mumbai News Desk

ಕುಲಾಲ ಪರ್ಬ  ಮುಂಬೈಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಕಾರ್ಯಕ್ರಮ.

Mumbai News Desk

ಕಟ್ಟಡ ನಿರ್ಮಾಣದ ನಿರ್ಲಕ್ಷ್ಯ: ‘ಜಸ್ಟೀಸ್ ಫಾರ್ ಸಂಸ್ಕೃತಿ’ಗಾಗಿ ಅಕ್ಟೋಬರ್ 12 ರಂದು ಬೃಹತ್ ಮೌನ ಪ್ರತಿಭಟನೆ

Mumbai News Desk

ಜೀರ್ಣೋದ್ಧಾರಗೊಂಡ ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಕುಂಭಾಭಿಷೇಕ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ನವಿ ಮುಂಬಯಿ ಶಾಖೆಯಲ್ಲಿ ದೀಪಾವಳಿಯ ಸಂಭ್ರಮಾಚರಣೆ

Mumbai News Desk