30 C
Mumbai
April 24, 2026
Mumbai News Kannada
ಸುದ್ದಿ

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು





ನಟ ಗೋವಿಂದ ಅವರು ತಮ್ಮದೇ ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸದ್ಯ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದು ಆಕಸ್ಮಿಕವಾಗಿ ನಡೆದಿರೋ ಘಟನೆ. ಗನ್​ನಿಂದ ಫೈಯರ್ ಆದ ಬುಲೆಟ್ , ಅವರ ಕಾಲಿಗೆ ತಾಗಿದೆ. ಮುಂಜನೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್​ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು ರೆಡಿ ಆಗುತ್ತಿದ್ದರು. ಅವರು ತಮ್ಮ ಪರವಾನಗಿ ಗನ್​ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್​ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್​ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ಗೋವಿಂದ ಅವರು ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, ಈಗ ಮೊದಲಿನ ಬೇಡಿಕೆ ಉಳಿದಿಲ್ಲ. ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಬ್ರ್ಯಾಂಡ್​ಗಳನ್ನು ಪ್ರಚಾರ ಮಾಡಿಕೊಂಡು ಸಮಯ ಕಳೆಯುತ್ತಿದ್ದಾರೆ.



Related posts

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

‘ನೆಲೆ ಫೌಂಡೇಶನ್ ‘ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ 2025

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.

Mumbai News Desk

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ದರ್ಶನ್ ಗೆ 6 ವಾರ ಕಾಲ ಶರತ್ತು ಬದ್ದ ಜಾಮೀನು

Mumbai News Desk