28.4 C
Mumbai
March 7, 2026
Mumbai News Kannada
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು





ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರ್​ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದರೊಂದಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ಗೆ ಮುಖಭಂಗವಾಗಿದೆ. ಲೋಕಾಸಭಾ ಚುನಾವಣೆಯಲ್ಲೂ ಸಹ ಟಿಕೆಟ್​ ಮಿಸ್ ಆಗಿತ್ತು, ಇದೀಗ ವಿಧಾನಪರಿಷತ್ ಉಚಪಾವಣೆಯ ಟಿಕೆಟ್​ ಸಹ ಕೈತಪ್ಪಿದೆ.

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಮರು ಚುನಾವಣೆ ಅ.21 ರಂದು ನಿಗದಿಯಾಗಿದ್ದು, ಬಿಜೆಪಿ ಗೆದ್ದಿದ್ದ ಕ್ಷೇತ್ರವಾಗಿರುವ ಹಿನ್ನೆಲೆಯಲ್ಲಿ ಟಿಕೆಟ್ ಬಿಜೆಪಿ ಪಾಲಿಗೆ ಸಿಕ್ಕಿದ್ದು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ. ಹಾಗಾಗಿ ಈ ಬಾರಿ ಗೆಲ್ಲುವ ಸಾಧ್ಯತೆ ಬಿಜೆಪಿಗೇ ಹೆಚ್ಚಾಗಿದೆ. ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿತ್ತು.

.

.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ, ಪೂರ್ವಭಾವಿ ಸಭೆ

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk

ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಉಪಮುಖ್ಯಮಂತ್ರಿಗಳಿಗೆ ಮನವಿ

Mumbai News Desk

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk