July 23, 2026
Mumbai News Kannada
ಸುದ್ದಿ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ : ಶರನ್ನವರಾತ್ರಿ ಉತ್ಸವ ಆರಂಭ







ಚಿತ್ರ ವರದಿ : ಪಿ.ಆರ್.ರವಿಶಂಕರ್ 

  ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಪಾಲ್ಘರ್ ಜಿಲ್ಲೆಯ ತುಳು ಕನ್ನಡಿಗರ  ಸಾಂಸ್ಕೃತಿಕ  ಶೃದ್ಧಾಕೇಂದ್ರವೆನಿಸಿರುವ ಬೊಯಿಸರ್ ಪಶ್ಚಿಮದ ಪ್ರಸಿದ್ಧ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವವು ಆರಂಭಗೊಂಡಿತು. 

ಶ್ರೀನಿವಾಸ್ ಕೋಟ್ಯಾನ್ ದಂಪತಿಗಳು ವಾಸ್ತುಪೂಜೆಯನ್ನು ನೆರವೇರಿಸಿದರು. ಆರಂಭದಲ್ಲಿ ಪ್ರತಿಷ್ಟಾಹೋಮ ಜರಗಿತು. ಆನಂತರ ಶ್ರೀದೇವೀ ಕಲಶ ಪ್ರತಿಷ್ಟೆಯನ್ನು ಶ್ರೀಮತಿ ಪದ್ಮಾವತಿ ಮತ್ತು ಸತ್ಯಾ ಎಸ್. ಕೋಟ್ಯಾನ್ ಹಾಗೂ ಶ್ರೀಮತಿ ಸುಹಾಸಿನಿ ದಾಮೋದರ್  ನಾಯ್ಕ್ ಇವರು ನೆರವೇರಿಸಿದರು. ಸದ್ಗುರು ನಿತ್ಯಾನಂದ ಭಜನಾ ಮಂಡಳಿಯ ವತಿಯಿಂದ

ಭಕ್ತಿ ಗೀತೆ , ಭಜನಾ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ಗರ್ಭಾ ನೃತ್ಯದ ಬಳಿಕ ಮಹಾ ಮಂಗಳ ಆರತಿ ಕಾರ್ಯಕ್ರಮಜರಗಿತು.

ಧಾರ್ಮಿಕ ವಿಧಿ ವಿಧಾನಗಳನ್ನು ಮಂದಿರದ ಪುರೋಹಿತರಾದ ಶ್ರೀ ರಾಜೇಶ್ ಶಾಂತಿ ನೆರವೇರಿಸಿದರು.

ಪಾಲ್ಘರ್ ತಾಲೂಕು ಹೋಟೆಲ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷ ರಘುರಾಮ್ ಎಮ್. ರೈ ಸೇರಿದಂತೆ ವಿವಿಧ ಸಂಸ್ಥೆಯ ಪದಾಧಿಕಾರಿಗಳು , ಪಾಲ್ಘರ್ , ಡಹಾಣೂ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾಭಿಮಾನಿಗಳು , ನಿತ್ಯಾನಂದ ಸೇವಾ ಟ್ರಸ್ಟ್ ವಿಶ್ವಸ್ಥರು , ಭಜನಾ ಮಂಡಳಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು .

ಕಾರ್ಯಕ್ರಮ ವ್ಯವಸ್ಥಾಪನೆಯಲ್ಲಿ ರಮಾನಂದ ಪೂಜಾರಿ ಸಹಕರಿಸಿದರು. 

ನವರಾತ್ರಿ ಉತ್ಸವವು ಅಶ್ವಯುಜ ಶುಕ್ಲ ಪ್ರತಿಪದೆಯಿಂದ ಅಶ್ವಯುಜ ಶುಕ್ಲ ನವಮಿಯವರೆಗೆ ( ಗುರುವಾರ  ಅಕ್ಟೋಬರ್ 03 ರಿಂದ ಶನಿವಾರ 12 ಅಕ್ಟೋಬರ್ ತನಕ ) ಜರಗಲಿರುವುದು. 

ನಿತ್ಯಾನಂದ ಸ್ವಾಮಿ ಮಂಗಳಾರತಿಯ ಬಳಿಕ ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆ ಜರಗಿತು.

ಚಿತ್ರ ಮತ್ತು ವರದಿ :

ಪಿ.ಆರ್.ರವಿಶಂಕರ್

8483980035



Related posts

ಭಾರತ್ ಬ್ಯಾಂಕ್‌ ನ ಗೋರೆಗಾಂವ್ ಶಾಖೆಯ ಗಣೇಶ್ ಪೂಜಾರಿ ಸೇವಾ ನಿವೃತ್ತಿ

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ – ಬಿಜೆಪಿಯ ಡಾ. ಧನಂಜಯ ಸರ್ಜಿ ಗೆ ಭಾರಿ ಗೆಲುವು ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಸೋಲು.

Mumbai News Desk