30 C
Mumbai
April 24, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.





   ಮಂಗಳೂರು ಅ 2.    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಒಕ್ಕೂಟದ ಮಹಾ ನಿರ್ದೇಶಕರಾದ  ಬೆಳ್ಳಾಡಿ ಅಶೋಕ್ ಎಸ್.ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ ಹೇರಿಕುದ್ರು ಗ್ರಾಮದ ನಿವಾಸಿ ಪ್ರೇಮಾ ಶೇಡ್ತಿಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಪಲಾನುಭವಿಯ ಸಹೋದರಿ ಗೀತಾ ಶೇಡ್ತಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು.

 ಮಹಾ ನಿರ್ದೇಶಕರಾದ  ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ ಹಲ್ತೂರು- ಉಳ್ತೂರು ಗ್ರಾಮದ ನಿವಾಸಿ  ಶೆಟ್ಟಿಯವರು ಕಿಡ್ನಿ ವೈಫಲ್ಯವಾಗಿ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಪಲಾನುಭವಿಯ ಪತಿ ಉದಯ್ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು.

 ಒಕ್ಕೂಟದ ಪೋಷಕ ಸದಸ್ಯರಾದ  ಅಶೋಕ್ ವಿಠ್ಠಲ್ ಶೆಟ್ಟಿ ಸೂರ್ಗೋಳಿ ಇವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ ಕನ್ಯಾನ ಗ್ರಾಮದ ನಿವಾಸಿ ಜ್ಯೋತಿಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಅವರ ಸಹೋದರ ರತ್ನಾಕರ್ ಆಚಾರ್ಯ ರವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು..

 ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ ಉಳ್ತೂರಿನ ನಿವಾಸಿ ಪ್ರಭಾವತಿ ಶೆಟ್ಟಿಯವರು ಕ್ಯಾನ್ಸರ್ ಎಂಬ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು  ಫಲಾನುಭವಿಯ ಗಂಡ  ತೇಜಪ್ಪ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು.*



Related posts

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ

Mumbai News Desk

ಖ್ಯಾತ ಬಾಲಿವುಡ್ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್ ನಿಧನ

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk