July 22, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.







   ಮಂಗಳೂರು ಅ 2.    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಒಕ್ಕೂಟದ ಮಹಾ ನಿರ್ದೇಶಕರಾದ  ಬೆಳ್ಳಾಡಿ ಅಶೋಕ್ ಎಸ್.ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ ಹೇರಿಕುದ್ರು ಗ್ರಾಮದ ನಿವಾಸಿ ಪ್ರೇಮಾ ಶೇಡ್ತಿಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಪಲಾನುಭವಿಯ ಸಹೋದರಿ ಗೀತಾ ಶೇಡ್ತಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು.

 ಮಹಾ ನಿರ್ದೇಶಕರಾದ  ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ ಹಲ್ತೂರು- ಉಳ್ತೂರು ಗ್ರಾಮದ ನಿವಾಸಿ  ಶೆಟ್ಟಿಯವರು ಕಿಡ್ನಿ ವೈಫಲ್ಯವಾಗಿ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಪಲಾನುಭವಿಯ ಪತಿ ಉದಯ್ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು.

 ಒಕ್ಕೂಟದ ಪೋಷಕ ಸದಸ್ಯರಾದ  ಅಶೋಕ್ ವಿಠ್ಠಲ್ ಶೆಟ್ಟಿ ಸೂರ್ಗೋಳಿ ಇವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ ಕನ್ಯಾನ ಗ್ರಾಮದ ನಿವಾಸಿ ಜ್ಯೋತಿಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು ಅವರ ಸಹೋದರ ರತ್ನಾಕರ್ ಆಚಾರ್ಯ ರವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು..

 ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ  ಕುಂದಾಪುರದ ಉಳ್ತೂರಿನ ನಿವಾಸಿ ಪ್ರಭಾವತಿ ಶೆಟ್ಟಿಯವರು ಕ್ಯಾನ್ಸರ್ ಎಂಬ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರು ಮಾಡಿದ ಸಹಾಯಧನದ ಚೆಕ್ಕನ್ನು  ಫಲಾನುಭವಿಯ ಗಂಡ  ತೇಜಪ್ಪ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು.*



Related posts

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು

Mumbai News Desk

ತುಳು ರಂಗಭೂಮಿ ಹಿರಿಯ ಕಲಾವಿದ, ಚಲನ ಚಿತ್ರ ನಟ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ

Mumbai News Desk

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Mumbai News Desk

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ದೆಹಲಿ : ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk