September 6, 2026
Mumbai News Kannada
ಸುದ್ದಿ

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು





ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರ್ ಪೂರ್ವ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಗ್ರೌಂಡ್ ಪ್ಲಸ್ ಒನ್ (ಜಿ+1) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿಯ ಪ್ರಕಾರ, ಬೆಂಕಿ ಮೀಟರ್ ಬಾಕ್ಸ್‌ಗೆ ತಗುಲಿತು ಮತ್ತು ಶೀಘ್ರದಲ್ಲೇ ಕಟ್ಟಡದ ಇತರ ಭಾಗಗಳಿಗೆ ಹರಡಿತು. ನೆಲ ಮಹಡಿಯಲ್ಲಿ ಅಂಗಡಿಯಿದ್ದು, ಮೇಲಿನ ಮಹಡಿಯಲ್ಲಿ ಕುಟುಂಬ ವಾಸವಾಗಿತ್ತು.



Related posts

ಸೌದಿ ಅರೇಬಿಯಾದ ಮದೀನಾ ಬಳಿ ಬಸ್-ಟ್ಯಾಂಕರ್ ಡಿಕ್ಕಿ: 42 ಭಾರತೀಯರು ಸಾವು

Mumbai News Desk

ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ಅವರನ್ನು ಭೇಟಿಯಾದ ರಾಜೇಂದ್ರ. ವಿ. ಶೆಟ್ಟಿ,

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ: ಮಿಥುನ್ ರೈ

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ವಿಧಿವಶ.

Mumbai News Desk