July 23, 2026
Mumbai News Kannada
ಸುದ್ದಿ

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು







ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರ್ ಪೂರ್ವ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಗ್ರೌಂಡ್ ಪ್ಲಸ್ ಒನ್ (ಜಿ+1) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿಯ ಪ್ರಕಾರ, ಬೆಂಕಿ ಮೀಟರ್ ಬಾಕ್ಸ್‌ಗೆ ತಗುಲಿತು ಮತ್ತು ಶೀಘ್ರದಲ್ಲೇ ಕಟ್ಟಡದ ಇತರ ಭಾಗಗಳಿಗೆ ಹರಡಿತು. ನೆಲ ಮಹಡಿಯಲ್ಲಿ ಅಂಗಡಿಯಿದ್ದು, ಮೇಲಿನ ಮಹಡಿಯಲ್ಲಿ ಕುಟುಂಬ ವಾಸವಾಗಿತ್ತು.



Related posts

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.

Mumbai News Desk

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk

ಉಡುಪಿ : ಕರ್ನಾಟಕದ ಪಿಯುಸಿ ಪ್ರತಿಭಾನ್ವಿತ ಸ್ಕೌಟ್, ಗೈಡ್ಸ್, ರೋವರ್, ರೆಂಜರ್ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk