July 23, 2026
Mumbai News Kannada
ಮುಂಬಯಿ

ಸಾಯಿನಾಥ ಮಿತ್ರ ಮಂಡಳಿಯಿಂದ ಹೊರೆ ಕಾಣಿಕೆ ಮೆರವಣಿಗೆ







ಚಿತ್ರ ವರದಿ : ಧನಂಜಯ ಪೂಜಾರಿ

ಮುಂಬಯಿಯ ಉಪನಗರ ಡೊಂಬಿವಲಿಯ ವಜ್ರ ಮಹೋತ್ಸವವನ್ನು ಆಚರಿಸುತ್ತಿರುವ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿಯ ನವರಾತ್ರಿ ಉತ್ಸವದಲ್ಲಿ ಪ್ರತಿದಿನ ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ ನಡೆಯುತ್ತಿದ್ದು ಸಾವಿರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆ ನಿಮಿತ್ತ ಹಲವಾರು ಸ್ಥಳೀಯ ಸಂಘ-ಸಂಸ್ಥೆಗಳು ಮಂಡಳಿಗೆ ಹೊರೆ ಕಾಣಿಕೆ ಸಮರ್ಪಿಸುತಿವೆ. ಅದರಲ್ಲಿ ಮುಖ್ಯವಾಗಿ ಶ್ರೀ ಸಾಯಿನಾಥ ಮಿತ್ರ ಮಂಡಳಿ, ಅಕ್ಟೋಬರ್ 6 ರ ರವಿವಾರ ಶ್ರೀ ಸಾಯಿನಾಥ ಮಿತ್ರ ಮಂಡಳಿ ಇವರಿಂದ ಹೊರೆ ಕಾಣಿಕೆ ಮೆರವಣಿಗೆ ಮೂಲಕ ನಡೆಯಿತು. ಜುನ ಡೊಂಬಿವಲಿಯ ಗಿರಿಜಾಮಾತ ಮಂದಿರದಿಂದ ಪ್ರಾರಂಭವಾದ ಮೆರವಣಿಗೆ ಬ್ಯಾಂಡ್ ವಾಲಗದ ಮೂಲಕ ಪಶ್ಚಿಮ ವಿಭಾಗ ಪೂಜಾ ಸ್ಥಳಕ್ಕೆ ತಲುಪಿತು. ಧರ್ಮದರ್ಶಿ ಅಶೋಕ್ ದಾಸು ಶೆಟ್ಟಿ, ಅಧ್ಯಕ್ಷರಾದ ಗೋಪಾಲ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿಲಾಸಿನಿ ಶೆಟ್ಟಿ ಹಾಗೋ ಪದಾಧಿಕಾರಿಗಳು ಮೆರವಣಿಗೆಯನ್ನು ಆದರಪೂರ್ವಕವಾಗಿ ಸ್ವಾಗತಿಸಿದರು.

ಸಾಯಿನಾಥ ಮಿತ್ರ ಮಂಡಳಿ ಅಧ್ಯಕ್ಷ ಮೋಹನ್ ಸಾಲ್ಯಾನ್, ಕಾರ್ಯದರ್ಶಿ ಸುರೇಶ್ ಮೊಗವೀರ, ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ಸಾಫಲ್ಯ ಸೇವಾ ಸಂಘದ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಜಿ ಎಸ್ ಬಿ ಸಭಾ, ಮುಲುಂಡ್, ಸಾಂಸ್ಕೃತಿಕ ಸ್ನೇಹ ಸಮ್ಮಿಲನ, ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

Mumbai News Desk

ಜ್ಞಾನ ವಿಕಾಸ ಮಂಡಳದ ಮೆಹ್ತಾ ಕಾಲೇಜಿನಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Mumbai News Desk

ಬಿಲ್ಲವರ  ಎಸೋಸಿಯೇಶನ್, ಮುಂಬಯಿ ಇದರ 2024-27ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ, ಹರೀಶ್ ಜಿ. ಅಮೀನ್, ನೇತೃತ್ವದ ಸ್ವಾಭಿಮಾನಿ ಬಿಲ್ಲವವರು ಬಣಕ್ಕೆ ಜಯ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಮಹಿಳಾ ವಿಭಾಗದಿಂದ ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk

ಮುಂಬೈ : ಗೋರೆಗಾಂವ್ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಸಾವು.

Mumbai News Desk