July 23, 2026
Mumbai News Kannada
ಸುದ್ದಿ

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ







ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ
ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‌ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸುವ ಸೌಲಭ್ಯ ಕಲ್ಪಿಸಲಾಗುವುದು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಾರಿ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಇರುವುದಿಲ್ಲ. ಯಾತ್ರಿಗಳು ಬುಕ್ ಮಾಡದೆ ಬಂದರೆ ನಾವು ಪರಿಶೀಲಿಸುತ್ತೇವೆ.

ನಿಲಕ್ಕಲ್ ಮತ್ತು ಎರುಮೇಲಿಯಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ವಂ ಸಚಿವ ವಿಎನ್ ವಾಸವನ್ ಹೇಳಿದ್ದಾರೆ. ಯಾತ್ರಿಕರಿಗೆ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಲಾಗುತ್ತದೆ. ಹೀಗಾಗಿ, ಯಾತ್ರಿಕರು ಕಡಿಮೆ ದಟ್ಟಣೆ ಇರುವ ಮಾರ್ಗವನ್ನು ಆಯ್ಕೆ ಮಾಡಬಹುದು.

ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು.

ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ಭಕ್ತರ ನಿರ್ವಹಣೆ ಸಮರ್ಪಕ ಆಗಿಸುವ ಹಿನ್ನೆಲೆ ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.

ಶಬರಿಮಲೆಗೆ ಹೋಗುವ ರಸ್ತೆಗಳು ಮತ್ತು ಪಾರ್ಕಿಂಗ್ ಮೈದಾನಗಳ ದುರಸ್ತಿ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಶಬರಿ ಅತಿಥಿ ಗೃಹ ನಿರ್ವಹಣೆ ಅಕ್ಟೋಬರ್ 31ಕ್ಕೆ ಪೂರ್ಣಗೊಳ್ಳಲಿದ್ದು, ಪ್ರಣವಂ ಅತಿಥಿ ಗೃಹದ ನವೀಕರಣ ಪೂರ್ಣಗೊಂಡಿದೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (11/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜುಲೈ 9 : ಗಣೇಶಪುರಿಯಲ್ಲಿ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿಗಳ ಮೂರ್ತಿ ಪುನರ್ ಪ್ರತಿಷ್ಠಾಪನೋತ್ಸವ: ಭಕ್ತರಿಗೆ ಅಪೂರ್ವ ದರ್ಶನದ ಸೌಭಾಗ್ಯ

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಮೈಲ್ ಸ್ಟೋನ್ ಪೆಜೇಂಟ್ಸ್ ನ ಆಯೋಜನೆಯಲ್ಲಿ ದುಬೈ ಯಲ್ಲಿ ” ಜಾಗತಿಕ ಮಹಿಳಾ ಸಮಾವೇಶ” ಮುಂಬೈಯ ಪ್ರಭಾ ಎನ್ ಸುವರ್ಣ ಅವರಿಂದ ಉಪನ್ಯಾಸ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk