September 6, 2026
Mumbai News Kannada
ಸುದ್ದಿ

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ






ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಹಿಂದೂ ದೇವಾಲಯಗಳು ಸರಕಾರದ ವಶದಲ್ಲಿದೆ.
ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಎಲ್ಲಾ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಹಾಗೂ ಅಯೋಧ್ಯೆ ಶ್ರೀರಾಮ ಜನ್ಮ ಭೂಮಿ ಟ್ರಸ್ಟ್ ನ ವಿಶ್ವಸ್ಥರಾಗಿರುವ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಾಚೀನ ದೇವಾಲಯಗಳನ್ನು ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿದೆ, ಸರಕಾರದ ವರ್ಷದಲ್ಲಿರುವ ದೇವಾಲಯಗಳನ್ನು ಹಿಂದುಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ, ಅದರ ಹೊರತಾಗಿಯೂ ಇದುವರೆಗೆ ಯಾವುದೇ ದೇವಾಲಯಗಳನ್ನು ಸರಕಾರ ತನ್ನ ಹಿಡಿತದಿಂದ ಮುಕ್ತಗೊಳಿಸಿಲ್ಲ. ಇತರ ಆರಾಧನಾ ಸ್ಥಳಗಳು ಅವರ ಹಿಡಿತದಲ್ಲಿವೆ, ದೇವಸ್ಥಾನಗಳು ಸರಕಾರದ ವಶದಲ್ಲಿ ಇರುವುದರಿಂದ ಶ್ರದ್ಧಾ ಕೇಂದ್ರಗಳಲ್ಲಿ ಅಪಚಾರವಾಗಲು ಅವಕಾಶವಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು.
ಇದೇ ಸಂದರ್ಭ ತಿರುಪತಿಯ ಲಡ್ಡು ಅಪವಿತ್ರವಾದ ಘಟನೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರವಾಗದಂತ್ತೆ ನೋಡಿಕೊಳ್ಳುವುದು
ಸರಕಾರಗಳ ಕರ್ತವ್ಯ. ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾದರೆ ಇಂಥ ಘಟನೆಗಳಿಗೆ ಕಡಿವಾಣ ಹಾಕಬಹುದು ಎಂದು ಸ್ವಾಮೀಜಿ ತಿಳಿಸಿದರು.



Related posts

ಮನಿಲಾದಲ್ಲಿ ಪ್ರಭಾ ಸುವರ್ಣ ಅವರಿಗೆ 50ನೇ ಗ್ಲೋಬಲ್ ವುಮನ್ ಅಚೀವರ್ಸ್ ಪ್ರಶಸ್ತಿ ಗೌರವ

Mumbai News Desk

ಜಾಗತಿಕ ಮಟ್ಟದಲ್ಲಿ ಕಾರ್ಕಳದ ಪ್ರತಿಭೆ: ಇಥಿಯೋಪಿಯದಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ನಿಟ್ಟೆಯ ವಿಶಾಲ್ ಪೂಜಾರಿ

Mumbai News Desk

ಮುಲ್ಕಿ : ಟೆಂಪೋ ಡಿಕ್ಕಿಯಾಗಿ ಉದ್ಯಮಿ ಲಿಂಗಪ್ಪ ಶೆಟ್ಟಿ ನಿಧನ

Mumbai News Desk

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk

ಸಂಸದ ಕೋಟ ಅವರ ಅವಿರತ ಪ್ರಯತ್ನದ ಫಲ :ಫೆ. 17ರಿಂದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಎಲ್ಎಚ್ ಬಿ ಕೋಚ್ ಮೂಲಕ ಪ್ರಯಾಣ

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk