July 23, 2026
Mumbai News Kannada
ಸುದ್ದಿ

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ








ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಹಿಂದೂ ದೇವಾಲಯಗಳು ಸರಕಾರದ ವಶದಲ್ಲಿದೆ.
ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಎಲ್ಲಾ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಹಾಗೂ ಅಯೋಧ್ಯೆ ಶ್ರೀರಾಮ ಜನ್ಮ ಭೂಮಿ ಟ್ರಸ್ಟ್ ನ ವಿಶ್ವಸ್ಥರಾಗಿರುವ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಾಚೀನ ದೇವಾಲಯಗಳನ್ನು ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿದೆ, ಸರಕಾರದ ವರ್ಷದಲ್ಲಿರುವ ದೇವಾಲಯಗಳನ್ನು ಹಿಂದುಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ, ಅದರ ಹೊರತಾಗಿಯೂ ಇದುವರೆಗೆ ಯಾವುದೇ ದೇವಾಲಯಗಳನ್ನು ಸರಕಾರ ತನ್ನ ಹಿಡಿತದಿಂದ ಮುಕ್ತಗೊಳಿಸಿಲ್ಲ. ಇತರ ಆರಾಧನಾ ಸ್ಥಳಗಳು ಅವರ ಹಿಡಿತದಲ್ಲಿವೆ, ದೇವಸ್ಥಾನಗಳು ಸರಕಾರದ ವಶದಲ್ಲಿ ಇರುವುದರಿಂದ ಶ್ರದ್ಧಾ ಕೇಂದ್ರಗಳಲ್ಲಿ ಅಪಚಾರವಾಗಲು ಅವಕಾಶವಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು.
ಇದೇ ಸಂದರ್ಭ ತಿರುಪತಿಯ ಲಡ್ಡು ಅಪವಿತ್ರವಾದ ಘಟನೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರವಾಗದಂತ್ತೆ ನೋಡಿಕೊಳ್ಳುವುದು
ಸರಕಾರಗಳ ಕರ್ತವ್ಯ. ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾದರೆ ಇಂಥ ಘಟನೆಗಳಿಗೆ ಕಡಿವಾಣ ಹಾಕಬಹುದು ಎಂದು ಸ್ವಾಮೀಜಿ ತಿಳಿಸಿದರು.



Related posts

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

ಸನಾತನ ಧರ್ಮ ಬಲಿಷ್ಠಗೊಳಿಸೋಣ: ಹರಿನಾರಾಯಣದಾಸ ಅಸ್ರಣ್ಣ

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk

ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ

Mumbai News Desk

ಕರ್ನಿರೆ ಸುವರ್ಣ ಪ್ರತಿಷ್ಠಾನದಿಂದ ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ   ಸಮ್ಮಾನ 

Mumbai News Desk