28.4 C
Mumbai
March 7, 2026
Mumbai News Kannada
ಸುದ್ದಿ

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ






ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಹಿಂದೂ ದೇವಾಲಯಗಳು ಸರಕಾರದ ವಶದಲ್ಲಿದೆ.
ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಎಲ್ಲಾ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಹಾಗೂ ಅಯೋಧ್ಯೆ ಶ್ರೀರಾಮ ಜನ್ಮ ಭೂಮಿ ಟ್ರಸ್ಟ್ ನ ವಿಶ್ವಸ್ಥರಾಗಿರುವ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಾಚೀನ ದೇವಾಲಯಗಳನ್ನು ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿದೆ, ಸರಕಾರದ ವರ್ಷದಲ್ಲಿರುವ ದೇವಾಲಯಗಳನ್ನು ಹಿಂದುಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ, ಅದರ ಹೊರತಾಗಿಯೂ ಇದುವರೆಗೆ ಯಾವುದೇ ದೇವಾಲಯಗಳನ್ನು ಸರಕಾರ ತನ್ನ ಹಿಡಿತದಿಂದ ಮುಕ್ತಗೊಳಿಸಿಲ್ಲ. ಇತರ ಆರಾಧನಾ ಸ್ಥಳಗಳು ಅವರ ಹಿಡಿತದಲ್ಲಿವೆ, ದೇವಸ್ಥಾನಗಳು ಸರಕಾರದ ವಶದಲ್ಲಿ ಇರುವುದರಿಂದ ಶ್ರದ್ಧಾ ಕೇಂದ್ರಗಳಲ್ಲಿ ಅಪಚಾರವಾಗಲು ಅವಕಾಶವಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು.
ಇದೇ ಸಂದರ್ಭ ತಿರುಪತಿಯ ಲಡ್ಡು ಅಪವಿತ್ರವಾದ ಘಟನೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರವಾಗದಂತ್ತೆ ನೋಡಿಕೊಳ್ಳುವುದು
ಸರಕಾರಗಳ ಕರ್ತವ್ಯ. ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾದರೆ ಇಂಥ ಘಟನೆಗಳಿಗೆ ಕಡಿವಾಣ ಹಾಕಬಹುದು ಎಂದು ಸ್ವಾಮೀಜಿ ತಿಳಿಸಿದರು.



Related posts

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk

ಸೌದಿ ಅರೇಬಿಯಾದ ಮದೀನಾ ಬಳಿ ಬಸ್-ಟ್ಯಾಂಕರ್ ಡಿಕ್ಕಿ: 42 ಭಾರತೀಯರು ಸಾವು

Mumbai News Desk

ತುಳುರಂಗಭೂಮಿಯಲ್ಲಿ ಇತಿಹಾಸ ಸೃಷ್ಟಿಸಿದ ಜೋಡು ಜೀಟಿಗೆ, – ಒಂದೇ ದಿನ ಎರಡು ಮಹಾನಗರಿಯ ಭವ್ಯ ವೇದಿಕೆಯಲ್ಲಿ ನಾಟಕ ಪ್ರದರ್ಶನ

Mumbai News Desk

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87%_ಅಂಕ

Mumbai News Desk

ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ

Mumbai News Desk