30 C
Mumbai
April 24, 2026
Mumbai News Kannada
ಮುಂಬಯಿ

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ






ಮುಂಬೈಯ ನ್ಯಾಷನಲಿಸ್ಟ್ ಕಾಂಗ್ರೇಸ್ ಪಕ್ಷದ (ಏನ್ ಸಿ ಪಿ )ನಾಯಕ ಬಾಬಾ ಸಿದ್ದಿಕ್ ಅವರನ್ನು ನಿನ್ನೆ ರಾತ್ರಿ( (12/10) 9.30 ಗಂಟೆಗೆ, ಮೂವರು ದಾಳಿಕೋರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಪೊಲೀಸರು ಘಟನೆಗೆ ಸಂಬಂಧಿಸಿದಂತ್ತೆ ಇಬ್ಬರನ್ನು ಬಂದಿಸಿದ್ದು, ಓರ್ವ ಉತ್ತರ ಪ್ರದೇಶ ಮತ್ತೊರ್ವ ಹರಿಯಾಣದವನು ಎಂದು ಗುರುತಿಸಲಾಗಿದ್ದು, ಮೂರನೇ ಹಂತಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಾಬಾ ಸಿದ್ದಿಕ್ ಅವರ ಮಗನ ಬಾಂದ್ರ ಪೂರ್ವದ ಕಛೇರಿಯ ಹೊರಗೆ ಮೂರು ಜನ ಬಾಬಾ ಸಿದ್ದಿಕ್ ಅವರ ಮೇಲೆ ಗುಂಡು ಹಾರಿಸಿದ್ದು, ಅವರನ್ನು ಕೂಡಲೇ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು, ಅವರು ಆಸ್ಪತ್ರೆಯಲ್ಲಿ ಸಾವನಪ್ಪಿದರು ಎಂದು ಬಲ್ಲ ಮೂಲಗಳು ತಿಳಿಸಿವೆ.
ಮುಂಬೈನ ಬಾಂದ್ರ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ ಅವರು, ಮಹಾರಾಷ್ಟ್ರ ಸರಕಾರದ ಮಾಜಿ ಸಚಿವರಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ಒಡನಾಟ ತೊರೆದು ಅಜಿತ್ ಪವರ್ ನೇತೃತ್ವದ ಎನ್‌ಸಿಪಿ ಸೇರಿದ್ದರು.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ,

Mumbai News Desk

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ರಾಯರ ಆರಾಧನೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ :ಮಹಿಳಾ ವಿಭಾಗದಿಂದ ಜರಗಿದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಶ್ರೀಕೃಷ್ಣ ವಿಠಲ ಪ್ರತಿಷ್ಠಾನ : ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ , ಸಾಧಕರಿಗೆ ಸನ್ಮಾನ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಇದರ ಅಧ್ಯಕ್ಷರಾಗಿ ಹರೀಶ್ ಜಿ ಅಮೀನ್ ಆಯ್ಕೆ

Mumbai News Desk

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಗೆ ಎಸ್ ಎಸ್ ಸಿ ಯಲ್ಲಿ ಶೇಕಡ 80% ಫಲಿತಾಂಶ

Mumbai News Desk