30.9 C
Mumbai
June 8, 2026
Mumbai News Kannada
ತುಳುನಾಡು

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ





ಜಗತ್ ಪ್ರಸಿದ್ಧ ಮಂಗಳೂರು ದಸರಾ ಮೆರವಣಿಗೆ ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಸಂಜೆ 4 ಗಂಟೆಗೆ ಆರಂಭಗೊಂಡಿತು. ಸುಮಾರು 60ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರುಗು ನೀಡಿತು. ದೇಶ – ವಿದೇಶಗಳಿಂದ ಬಂದ ಲಕ್ಷಾಂತರ ಮಂದಿ ಭಕ್ತರು ಈ ದಸರಾ ಮೆರವಣಿಗೆಗೆ ಸಾಕ್ಷಿಯಾದರು.
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕಳೆದ 10 ದಿನಗಳಿಂದ ಅದ್ಧೂರಿಯಾಗಿ ನಡೆದ ನವರಾತ್ರಿ ಮಹೋತ್ಸವಕ್ಕೆ ದಸರಾ ಮೆರವಣಿಗೆಯೊಂದಿಗೆ ತೆರೆ ಕಾಣಲಿದೆ. ಅಕ್ಟೋಬರ್ 3 ರಂದು ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ದೀಪ ಬೆಳಗಿಸುವುದರೊಂದಿಗೆ ಆರಂಭಗೊಂಡ ಈ ದಸರಾ ಮೆರವಣಿಗೆ ಇಂದು ಬೃಹತ್ ಮೆರವಣಿಗೆಯೊಂದಿಗೆ ಸಂಪನ್ನಗೊಳ್ಳಲಿದೆ. ಸಂಜೆ ಸುಮಾರು 4 ಗಂಟೆಗೆ ಕ್ಷೇತ್ರದಿಂದ ಹೊರಟ ಈ ಬೃಹತ್ ದಸರಾ ಮೆರವಣಿಗೆಯಲ್ಲಿ ವಿಘ್ನನಿವಾರಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯರ ಮೂರ್ತಿಗಳನ್ನು ಸ್ತಬ್ಧ ಚಿತ್ರದೊಂದಿಗೆ ಕೊಂಡೊಯ್ಯಲಾಯಿತು. ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬೃಹತ್ ದಸರಾ ಮೆರವಣಿಗೆ ನಡೆಯುತ್ತಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಇಷ್ಟು ಅಚ್ಚುಕಟ್ಟಾಗಿ ನಡೆಯುವ ಈ ದಸರಾವನ್ನು ಭಕ್ತರ ಸಹಕಾರದಿಂದ ಅದ್ಧೂರಿಯಾಗಿ ನಡೆಸಲಾಗುತ್ತದೆ.



Related posts

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk

ಕಾಪು: ಜನ ಮೆಚ್ಚಿದ ತಹಶೀಲ್ದಾರ್ ಡಾ. ಪ್ರತಿಭಾ ಅವರಿಗೆ ಆತ್ಮೀಯ ಬೀಳ್ಕೊಡುಗೆ

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk

ತುಳುವೆರೆ ‘ತುಡರ ಪರ್ಬ’: ಬಲಿ ಚಕ್ರವರ್ತಿ ಬೊಕ್ಕ ಬೆನ್ನಿ ಸಂಸ್ಕೃತಿದ ಸಂಗಮ

Mumbai News Desk

ಮುಲ್ಕಿ : ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ ಅವರಿಗೆ ಸನ್ಮಾನ

Mumbai News Desk

ಹೂಡೆ : ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ 101ನೇ ಭಜನಾ ಮಂಗಳೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ವೈಭವ

Mumbai News Desk