26.3 C
Mumbai
March 7, 2026
Mumbai News Kannada
ಮಹಾರಾಷ್ಟ್ರ

ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ





ಮಹಾರಾಷ್ಟ್ರದ ರಾಜಧಾನಿಯಾದ ವಾಣಿಜ್ಯ ನಗರಿ ಮುಂಬೈಗೆ ಹೋಗುವ ಕಾರುಗಳು ಇನ್ಮುಂದೆ ಟೋಲ್ ಕಟ್ಟಬೇಕಿಲ್ಲ. ಎಲ್ಲಾ ಹಗುರ ಮೋಟಾರು ವಾಹನಗಳಿಗೆ ಟೋಲ್​ನಿಂದ ವಿನಾಯಿತಿ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಮಧ್ಯ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಅದರ ಹೊಸ್ತಿಲಲ್ಲೇ ಸರ್ಕಾರ ತೆಗೆದುಕೊಂಡಿರುವ ಈ ಟೋಲ್ ವಿನಾಯಿತಿ ನಿರ್ಧಾರವನ್ನು ಎಲೆಕ್ಷನ್ ಗಿಮಿಕ್ ಎಂದು ವಿಪಕ್ಷಗಳು ಟೀಕಿಸಿವೆ.

ಮುಂಬೈ ನಗರವನ್ನು ಪ್ರವೇಶಿಸಲು ಇರುವ ಆರು ರಸ್ತೆಗಳಲ್ಲಿ ಟೋಲ್ ಬೂತ್​ಗಳಿವೆ. ದಹಿಸಾರ್, ಆನಂದ್ ನಗರ್, ವೈಶಾಲಿ, ಐರೋಲಿ ಮತ್ತು ಮುಲುಂದ್​ನಲ್ಲಿರುವ ಟೋಲ್​ಗಳಲ್ಲಿ ನಾಳೆಯಿಂದ ಲೈಟ್ ಮೋಟಾರು ವಾಹನಗಳು ಟೋಲ್ ಕಟ್ಟುವ ಅಗತ್ಯ ಇರುವುದಿಲ್ಲ. ಮುಕ್ತವಾಗಿ ಸಂಚರಿಸಬಹುದಾಗಿದೆ.

2002ರಿಂದಲೂ ಈ ಸ್ಥಳಗಳಲ್ಲಿರುವ ಟೋಲ್​ಗಳಲ್ಲಿ 45 ರೂನಿಂದ 75 ರೂವರೆಗೆ ಟೋಲ್ ವಸೂಲಿ ಮಾಡಲಾಗುತ್ತಿದೆ. 2026ರವರೆಗೂ ಈ ಟೋಲ್ ಜಾರಿಯಲ್ಲಿರುತ್ತದೆ. ಈಗ ಭಾರೀ ತೂಕದ ವಾಹನಗಳು ಮಾತ್ರವೇ ಟೋಲ್ ಕಟ್ಟಬೇಕಾಗುತ್ತದೆ. ಮುಂಬೈಗೆ ಸಾಗುವ ಈ ರಸ್ತೆಗಳಲ್ಲಿ ಒಟ್ಟು 3.5 ಲಕ್ಷ ವಾಹನಗಳು ಟೋಲ್ ಬಳಸುತ್ತವೆ. ಇವುಗಳಲ್ಲಿ 2.80 ಲಕ್ಷ ವಾಹನಗಳು ಎಲ್​ಎಂವಿಗಳಾಗಿವೆ.

ತಾಂತ್ರಿಕವಾಗಿ 3,500 ಕಿಲೋಗಿಂತ ಕಡಿಮೆ ತೂಕ ಇರುವ ವಾಹನಗಳನ್ನು ಹಗುರ ಮೋಟಾರು ವಾಹನಗಳೆಂದು ಪರಿಗಣಿಸಲಾಗುತ್ತದೆ. ಕಾರುಗಳಿಂದ ಹಿಡಿದು ಸಣ್ಣ ಟ್ರಕ್​ಗಳವರೆಗೆ ಎಲ್ಲಾ ರೀತಿಯ ವಾಹನಗಳು ಎಲ್​ಎಂವಿಗಳಾಗಿವೆ.

ಈ ಟೋಲ್ ಬೂತ್​ಗಳಲ್ಲಿ ವಾಹನಗಳು ಟೋಲ್ ಪಾವತಿಸಲು ಸರದಿಯಲ್ಲಿ ನಿಲ್ಲುತ್ತವೆ. ಕೆಲ ನಿಮಿಷಗಳ ವ್ಯಯವಾಗುತ್ತದೆ. ಈಗ ಟೋಲ್ ಅನ್ನೇ ರದ್ದು ಮಾಡಲಾಗಿರುವುದರಿಂದ ವಾಹನಗಳು ಅಡೆತಡೆಯಿಲ್ಲದೆ ಸಂಚರಿಸಬಹುದು.



Related posts

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,

Mumbai News Desk

ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್, 21 ನೇ ವಾರ್ಷಿಕೋತ್ಸವ, ಕರ್ನಾಟಕ ರಾಜ್ಯೋತ್ಸವ ಅಚರಣೆ

Mumbai News Desk

ಮಹಾರಾಷ್ಟ್ರ : ನಗರ ಸಂಸ್ಥೆಗಳ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಮಹಾಯುತಿ

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಸಾಮಾನ್ಯ ಮನುಷ್ಯನನ್ನು ಸೂಪರ್ ಮ್ಯಾನ್ ಆಗಿ ಪರಿವರ್ತಿಸುತ್ತೇವೆ; ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಪ್ರತಿಕ್ರಿಯೆ

Mumbai News Desk

ಮಹಾರಾಷ್ಟ್ರ : ವಿರಾರ್ ನಲ್ಲಿ ಕಟ್ಟಡ ಕುಸಿದು 5 ಸಾವು, 9 ಜನರಿಗೆ ಗಾಯ; ಬಿಲ್ಡರ್ ಬಂಧನ

Mumbai News Desk