32 C
Mumbai
March 7, 2026
Mumbai News Kannada
ತುಳುನಾಡು

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ





 ಉಡುಪಿ ಅ 15.  ದೊಡ್ಡನ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ವಿಜಯ ದಶಮಿಯ ಪರ್ವಕಾಲದಲ್ಲಿ ಬಲಿ ಉತ್ಸವವು ಕ್ಷೇತ್ರದ ಧರ್ಮದ ಶ್ರೀ ಶ್ರೀಯುತ ಶ್ರೀ  ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ   ವೇದಮೂರ್ತಿ ಸರ್ವೇಶ ತಂತ್ರಿಗಳ ತಂತ್ರತ್ವ ದಲ್ಲಿ  ಸಂಪನ್ನಗೊಂಡಿತು..

 ಸಂಜೆ ಆರಾಧನಾ ರಂಗ ಪೂಜೆಯ ಬಳಿಕ ಬಲಿ ಉತ್ಸವ ಆರಂಭಗೊಂಡಿತು.. ಬಲಿ ಉತ್ಸವದಲ್ಲಿ ಶ್ರೀ ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸುತ್ತು ವಿಶೇಷ ಆಕರ್ಷಣೆಯಾಗಿತ್ತು. ಪಲ್ಲಕ್ಕಿ ಉತ್ಸವ ವಸಂತ ಪೂಜೆ  ನೆರವೇರಿತು. ವಸಂತ ಪೂಜೆಯಲ್ಲಿ ಸಮರ್ಪಿಸುವ ಅಷ್ಟವದನದಲ್ಲಿ ವೇದಮೂರ್ತಿ ವಿಕ್ಯಾತ್ ಭಟ್  ,ಸ್ವಸ್ತಿಕ್ ಆಚಾರ್ಯ, ನಾಗಶಯನ  ಚಂದ್ರಕಲಾ ಶರ್ಮ ಉಪ್ಪುರು ಭಾಗ್ಯಲಕ್ಷ್ಮಿ . ಪ್ರೀತಮ್ ಕುಮಾರ್ ಶ್ರೀ ದುರ್ಗಾ ಆದಿಶಕ್ತಿ ಭಜನಾ ಮಂಡಳಿಯ ಸದಸ್ಯರು, ಸಹಕರಿಸಿದರು..

 ಪಲ್ಲಕ್ಕಿ ಚಾಮರ ಸೇವೆ ಸಹಿತ ನೃತ್ಯವನ್ನು ಬೆಳ್ಮಣ್ಣು ವನದುರ್ಗ ಬಳಗದ  ವಿಪ್ರಬಾಂಧವರು ನೆರವೇರಿಸಿದರು.. ನೃತ್ಯ ಸುತ್ತನ್ನು ಕುಮಾರಿ ಸ್ವಾತಿ ಆಚಾರ್ಯ ಯಕ್ಷಗಾನ ಸುತ್ತಿನಲ್ಲಿ ಉಪ್ಪುರು ಭಾಗ್ಯ ಲಕ್ಷ್ಮಿ ಭಜನೆ ಸುತ್ತಿನಲ್ಲಿ ಕಾಲಭೈರವ ಭಜನಾ ಮಂಡಳಿ ಗುಂಡಿಬೈಲು ಶೃಂಗಾರ ವಾದ್ಯದಲ್ಲಿ ವಿಜಯ ಸೇರಿಗಾರ್ ಮತ್ತು ಬಳಗದವರು ನಾದಸ್ವರ ವಾದನದಲ್ಲಿ ಅಲೆವೂರು ರಂಜಿತ್ ಸೇರಿಗಾರ, ಹಾಗೂ ಪಂಚವಾದ್ಯ ಸೇವೆ ನೆರವೇರಿತು.. ಅರ್ಚಕ ಅನಿಷ ಆಚಾರ್ಯ ಹಾಗೂ ಆನಂದ್ ಬಾಯರಿ ಸರ್ವಸೇವೆಯಲ್ಲಿ ಸಹಕರಿಸಿದರು 

 ದೇವಿಯ ನರ್ತನ  ಸೇವೆಯನ್ನು ನೀರೇ ಬೈಲು ಶ್ರೀ ಗಣೇಶ್ ಭಟ್ ಅತಿ ಅದ್ಭುತವಾಗಿ ನಿರ್ವಹಿಸಿದರು ಎಂದು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ತಿಳಿಸಿರುತ್ತಾರೆ



Related posts

ಓಂ ಶ್ರೀ ಜಗದೀಶ್ವರಿ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.)ಯ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಕ್ಷೇತ್ರ ಪ್ರದಕ್ಷಿಣೆಯ 23ನೇ ದಿನ : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ದರುಶನ

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk