32 C
Mumbai
April 24, 2026
Mumbai News Kannada
ಮುಂಬಯಿ

ಆಸರೆ ಸೇವಾ ಮಿತ್ರ ಬಳಗ ವಸಯಿ : ಇದರ ಉದ್ಘಾಟನಾ ಕಾರ್ಯಕ್ರಮ, ಮಕ್ಕಳ ಯಕ್ಷಗಾನ






ಜನಪರ ಕಾರ್ಯಗಳ ಮೂಲಕ ಸಂಸ್ಥೆ ಬೆಳಗಲಿ – ಉದ್ಯಮಿ ರತ್ನಾಕರ್ ಶೆಟ್ಟಿ


ಆಸರೆ ಸೇವಾ ಮಿತ್ರ ಬಳಗ ವಸಯಿ ಇದರ ಉದ್ಘಾಟನಾ ಕಾರ್ಯಕ್ರಮ ಮತ್ತು ರಾಮಾಂಜನೇಯ ಯಕ್ಷ ನಾಟ್ಯಾಲಯ ಅಂಗರಗುಡ್ಡೆ ಕೆಂಚನಕರೆ, ಮುಲ್ಕಿ ಇವರ ಕದಂಬ ಕೌಶಿಕಿ ಎಂಬ ಮಕ್ಕಳ ಯಕ್ಷಗಾನ ಪ್ರದರ್ಶನವು ತಾ 13-10-24ರಂದು ವಿರಾರ್ ಪೂರ್ವದ ಹೋಟೆಲ್ ಲೀ ವಿವಂತ ಇದರ ಜ್ಯುಪಿಟರ್ ಸಭಾಗ್ರಹದಲ್ಲಿ ನಡೆಯಿತು.
ಸಂಸ್ಥೆಯ ಉದ್ಘಾಟನೆಯನ್ನು ಉದ್ಯಮಿ ರತ್ನಾಕರ್ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಸಂಘಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು “ಈ ಸಂಸ್ಥೆ ಜನಪರ ಕಾರ್ಯಗಳನ್ನು ಮಾಡುವ ಉದ್ದೇಶದಿಂದ ಹುಟ್ಟಿಕೊಂಡ ಸಂಸ್ಥೆಯಾಗಿರುವುದರಿಂದ ಮುಂದೆ ಈ ಸಂಸ್ಥೆಯ ಮುಖಾಂತರ ಅನೇಕ ಉತ್ತಮ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ. ಇವರ ಈ ಸಮಾಜಪರ ಕಾರ್ಯಗಳಿಗೆ ಸದಾ ನನ್ನ ಬೆಂಬಲಿವಿದೆ” ಎಂದು ಶುಭ ಹಾರೈಸಿದರು.


ಪ್ರಸ್ತಾವಿಕ ಭಾಷಣವನ್ನು ಮಾಡಿದ ಸಂಸ್ಥೆಯ ನೇತಾರ ಸತೀಶ್ ಶೆಟ್ಟಿ ಕೆಂಚನಕೆರೆಯವರು ಎಲ್ಲರನ್ನೂ ಸ್ವಾಗತಿಸಿ, ಸಂಘದ ಉದ್ದೇಶ ಮತ್ತು ಮುಂದಿನ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿ, ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಸರ್ವರಿಗೂ ಧನ್ಯವಾದ ಅರ್ಪಿಸಿದರು.
ಮುಖ್ಯ ಅತಿಥಿ ಉದ್ಯಮಿ, ಯಕ್ಷಗಾನ ಕಲಾವಿದ ಶಂಕರ್ ಆಳ್ವಾ ಕರ್ನೂರು ಅವರು “ಮನುಷ್ಯ ಎಲ್ಲೇ ಇದ್ದರೂ ತಾನು ಹುಟ್ಟಿ ಬೆಳೆದ ಊರು ಮತ್ತು ಕರ್ಮ ಭೂಮಿಯನ್ನು ಎಂದು ಮರೆಯಬಾರದು. ಸತೀಶ್ ಶೆಟ್ಟಿ ಕೆಂಚನಕೆರೆ ಎರಡನ್ನು ನೆನಪಿಸುವ ಕೆಲಸವನ್ನು ಈ ಕಾರ್ಯಕ್ರಮದ ಮೂಲಕ ಮುಂಬೈಯಲ್ಲಿ ಮಾಡಿದ್ದಾರೆ. ಊರಿನ ಮಕ್ಕಳ ಯಕ್ಷಗಾನ ಕಲಾವಿದರನ್ನು ಮುಂಬೈಗೆ ತರಿಸಿ ಕಲೆಗೆ, ಕಲಾವಿದರಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಿದ್ದಾರೆ. ಕಲಾವಿದರಾದ ಮಕ್ಕಳಿಗೆ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಧನಸಹಾಯ ನೀಡಿ ಜನಸೇವೆಗೆ ನಾಂದಿ ಹಾಡಿದ್ದಾರೆ, ಮುಂದೆಯೂ ಇಂಥ ಜನ ಸೇವಾ ಕಾರ್ಯಗಳು ಈ ಸಂಸ್ಥೆ ಮುಖಾಂತರ ನಡೆಯಲಿ” ಎಂದು ಶುಭ ಹಾರೈಸಿದರು.


ಕರ್ನಾಟಕ ಸಂಘ ವಸಾಯಿ ಇದರ ಅಧ್ಯಕ್ಷರಾದ ಉದ್ಯಮಿ ಪಾಂಡು ಶೆಟ್ಟಿ ಅವರು ಮಾತನಾಡುತ್ತಾ “ಜೀವದಾನಿ ಮಂದಿರದ ಸನ್ನಿಧಿಯಲ್ಲಿ ದಸರಾದ ಈ ಸಂದರ್ಭದಲ್ಲಿ ಕದಂಬ ಕೌಶಿಕೆ ಎಂಬ ದೇವಿಯ ಪುಣ್ಯ ಕಥೆಯನ್ನು ಯಕ್ಷಗಾನ ರೂಪದಲ್ಲಿ ಪ್ರದರ್ಶನ ನೀಡಿ ಜನಮನ ರಂಜಿಸಿದ್ದಾರೆ. ಇಂತಹ ಕಾರ್ಯಕ್ರಮದ ಮೂಲಕ ನಮ್ಮ ಸನಾತನ ಸಂಸ್ಕೃತಿ ಉಳಿಯಲು ಕಾರಣವಾಗುತ್ತದೆ, ಸಂಸ್ಥೆಯಿಂದ ಮತ್ತಷ್ಟು ಜನಪರ ಸೇವೆಗಳು ನಡೆಯುತ್ತಿರಲಿ” ಎಂದರು.
ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತ ಕೊಲ್ಯಾರು ರಾಜು ಶೆಟ್ಟಿ ಅವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಉದ್ಯಮಿಗಳಾದ ಪ್ರದೀಪ್ ಶೆಟ್ಟಿ, ಶಂಕರ್ ಭಂಡಾರಿ, ಸುಂದರ್ ಪೂಜಾರಿ, ಜಿತೇಶ್ ಆಚಾರ್ಯ, ಗಣೇಶ್ ಆಚಾರ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.


ಊರಿನಿಂದ ಬಂದ ಎಲ್ಲ ಬಾಲಕಲಾವಿದರನ್ನು ಗೌರವಿಸಿ, ಯಕ್ಷ ಗುರುಗಳಾದ ಹರಿರಾಜ್ ಶೆಟ್ಟಿಗಾರ್ ಕಿನ್ನಿಗೋಳಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಮನೋರಂಜನ ಕಾರ್ಯಕ್ರಮದ ಅಂಗವಾಗಿ ರಾಮಾಂಜನೇಯ ಯಕ್ಷ ನಾಟ್ಯಲಯ ಅಂಗರಗುಡ್ಡೆ ಕೆಂಚನಕೆರೆ, ಮುಲ್ಕಿ ತಂಡದ ಮಕ್ಕಳಿಂದ ಕದಂಬ ಕೌಶಿಕೆ ಎಂಬ ಯಕ್ಷಗಾನ ಪ್ರದರ್ಶನ ಜನಮನ ರಂಜಿಸುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮವನ್ನು ಕಲಾಸಂಘಟಕ ಪ್ರವೀಣ್ ಶೆಟ್ಟಿ ಕಣಂಜಾರು ನಿರೂಪಿಸಿದರು.



Related posts

ಗೋರೆಗಾಂವ್: ಶ್ರದ್ಧಾ-ಭಕ್ತಿಯಿಂದ ಜರುಗಿದ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ 61ನೇ ವಾರ್ಷಿಕೋತ್ಸವ

Mumbai News Desk

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ

Mumbai News Desk

ಬಿಲ್ಲವರ ಎಸೋಶಿಯೇಶನ್ ಮುಂಬಯಿ ಬೊರಿವಲಿ-ದಹಿಸರ್ ಸ್ಥಳೀಯ ಕಚೇರಿ 16ನೇ ವರ್ಧಂತಿ ಗುರುಮೂರ್ತಿ ಪ್ರತಿಷ್ಠಾಪನೆ.

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು  ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ, 59ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ

Mumbai News Desk

ವಡಾಲದ ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗೆ ಎಸ್ ಎಸ್ ಸಿ ಯಲ್ಲಿ ಶೇಕಡ 100% ಫಲಿತಾಂಶ.

Mumbai News Desk