28.4 C
Mumbai
March 7, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )





ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಪ್ರಶಸ್ತಿಯ ಸರಮಾಲೆಗೆ ಮತ್ತೊಂದು ಮಣಿ ಸೇರ್ಪಡೆಗೊಂಡಿತು.
ಅಕ್ಟೊಬರ್ 19ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಆಲ್ ಇಂಡಿಯಾ ಕೋ -ಆಪರೇಟಿವ್ ಬ್ಯಾಂಕ್ಸ್ ಸಮ್ಮಿತ್ ನಲ್ಲಿ ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ (Best HR Management Award) ಪ್ರಧಾನಿಸಲಾಯಿತು.
ಗುಜರಾತ್ ಸರಕಾರದ ಕ್ಯಾಬಿನೆಟ್ ಸಚಿವ ಜಯೇಶ್ ರಾಡಿಯ ಅವರು ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು.
ಈ ಶುಭ ಸಂದರ್ಭದಲ್ಲಿ ಎಂ ಎಸ್ ಸಿ ಬ್ಯಾಂಕ್ ನ ಪ್ರಮೋದ್ ಕಾರ್ನಾಡ್, ಮನೋಜ್ ಅಗರ್ವಾವಾಲ್, ಬ್ಯಾಂಕಿಂಗ್ ಫ್ರ್ಯಾಂಟಿಯರ್ಸ್ ನ ಬಾಬು ನಾಯರ್, ಭಾರತ್ ಬ್ಯಾಂಕಿನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾನಂದ ಎಸ್ ಕರ್ಕೇರ, ಜಂಟಿ ಆಡಳಿತ ನಿರ್ದೇಶಕ , ದಿನೇಶ್ ಬಿ ಸಾಲ್ಯಾನ್ ಉಪಸ್ಥಿತರಿದ್ದರು.

ಭಾರತ್ ಬ್ಯಾಂಕ್ ತನ್ನ 101 ಶಾಖೆಗಳು, 3 ವಿಸ್ತರಣ ಕೌಂಟರ್‌ಗಳು, 104 ಆನ್-ಸೈಟ್ ಎಟಿಎಂ ಕೇಂದ್ರಗಳು ಮತ್ತು 3 ಆಫ್-ಸೈಟ್ ಎಟಿಎಂ ಕೇಂದ್ರಗಳ ಮೂಲಕ ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್ ರಾಜ್ಯಗಳಾದ್ಯಂತ ಸೇವೆಗಳನ್ನು ನೀಡುತ್ತಿದೆ.
2023-24ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ವಿವಿಧ ಸಂಸ್ಥೆಗಳಿಂದ ಒಟ್ಟು ನಾಲ್ಕು ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಿದೆ.



Related posts

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ದುಬಾಯಿಯಲ್ಲಿ ಸಾಧಕರಿಗೆ ಸಂಮಾನದ ಜೊತೆ ದಶಮಾನದ ಸಂಭ್ರಮಜೂ.29 ರಂದು ಏಳು ಮಂದಿ ಸಾಧಕರಿಗೆ ಸನ್ಮಾನ ಮೂರು ಸಾಧಕ ಸಂಸ್ಥೆಗಳಿಗೆ ಗೌರವ

Mumbai News Desk

ಸಿ. ಟಿ. ಸಾಲಿಯಾನ್ ರವರಿಗೆ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶ್ರಧಾಂಜಲಿ ಸಭೆ .

Mumbai News Desk