September 6, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )





ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಪ್ರಶಸ್ತಿಯ ಸರಮಾಲೆಗೆ ಮತ್ತೊಂದು ಮಣಿ ಸೇರ್ಪಡೆಗೊಂಡಿತು.
ಅಕ್ಟೊಬರ್ 19ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಆಲ್ ಇಂಡಿಯಾ ಕೋ -ಆಪರೇಟಿವ್ ಬ್ಯಾಂಕ್ಸ್ ಸಮ್ಮಿತ್ ನಲ್ಲಿ ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ (Best HR Management Award) ಪ್ರಧಾನಿಸಲಾಯಿತು.
ಗುಜರಾತ್ ಸರಕಾರದ ಕ್ಯಾಬಿನೆಟ್ ಸಚಿವ ಜಯೇಶ್ ರಾಡಿಯ ಅವರು ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು.
ಈ ಶುಭ ಸಂದರ್ಭದಲ್ಲಿ ಎಂ ಎಸ್ ಸಿ ಬ್ಯಾಂಕ್ ನ ಪ್ರಮೋದ್ ಕಾರ್ನಾಡ್, ಮನೋಜ್ ಅಗರ್ವಾವಾಲ್, ಬ್ಯಾಂಕಿಂಗ್ ಫ್ರ್ಯಾಂಟಿಯರ್ಸ್ ನ ಬಾಬು ನಾಯರ್, ಭಾರತ್ ಬ್ಯಾಂಕಿನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾನಂದ ಎಸ್ ಕರ್ಕೇರ, ಜಂಟಿ ಆಡಳಿತ ನಿರ್ದೇಶಕ , ದಿನೇಶ್ ಬಿ ಸಾಲ್ಯಾನ್ ಉಪಸ್ಥಿತರಿದ್ದರು.

ಭಾರತ್ ಬ್ಯಾಂಕ್ ತನ್ನ 101 ಶಾಖೆಗಳು, 3 ವಿಸ್ತರಣ ಕೌಂಟರ್‌ಗಳು, 104 ಆನ್-ಸೈಟ್ ಎಟಿಎಂ ಕೇಂದ್ರಗಳು ಮತ್ತು 3 ಆಫ್-ಸೈಟ್ ಎಟಿಎಂ ಕೇಂದ್ರಗಳ ಮೂಲಕ ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್ ರಾಜ್ಯಗಳಾದ್ಯಂತ ಸೇವೆಗಳನ್ನು ನೀಡುತ್ತಿದೆ.
2023-24ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ವಿವಿಧ ಸಂಸ್ಥೆಗಳಿಂದ ಒಟ್ಟು ನಾಲ್ಕು ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಿದೆ.



Related posts

ಮೇರು ಸಾಹಿತಿ ಅಮೃತ ಸೋಮೇಶ್ವರ ನಿಧನ.

Mumbai News Desk

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ನಿಧನ

Mumbai News Desk

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk