24.7 C
Karnataka
April 3, 2025
ಸುದ್ದಿ

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ



ಮುಂಬಯಿ : ಕನ್ನಡ ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಪರಿಚಾರಿಕೆಯ ಪರಮೊಧ್ಯೇಯ ಹೊಂದಿರುವ ಡಾ. ವೇಮಗಲ್ ನಾರಾಯಣ ಸ್ವಾಮೀ ಅವರ ಒತ್ತಾಸೆಯಿಂದ ಆರಂಭವಾದ “ಡಾ. ವೇಮಗಲ್ ನಾರಾಯಣ ಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ” ವು ಕಳೆದ ನಾಲ್ಕು ವರ್ಷಗಳಿಂದ ರಾಷ್ಟ್ರೀಯ ಮಟ್ಟದ ಸಾಹಿತ್ತಿಕ ಹಾಗು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿದ್ದು ಪ್ರತೀ ವರ್ಷ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುತ್ತಿದೆ. “ಸಂಸ್ಕೃತಿ ಸಿರಿ” ಈ ಪ್ರಶಸ್ತಿಯು 25 ಸಾವಿರ ರೂಪಾಯಿ ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.

ಬಂಟರ ಸಂಘ ಮುಂಬಯಿಯ ಪ್ರಧಾನ ಕಾರ್ಯದರ್ಶಿ, ಖ್ಯಾತ ಆರ್ಥಿಕ ಸಲಹೆಗಾರ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕರಿತ. ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ. ಆರ್. ಕೆ. ಶೆಟ್ಟಿಯವರು ಈ ಸಲದ “ಸಂಸ್ಕೃತಿ ಸಿರಿ ,”ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ .
ನ. 8 ರಂದು ಬೆಂಗಳೂರಿನ ಕಲಾಕ್ಷೇತ್ರದಲ್ಲಿ ನಡೆಯಲಿರುವ ಪ್ರಶಸ್ತಿ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರಧಾನಿಸಿ ಗೌರವಿಸಲಾಗುತ್ತದೆ.

ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಡಾ. ಆರ್ ಕೆ ಶೆಟ್ಟಿಯವರು ಜೀವವಿಮಾ ಕ್ಷೇತ್ರದ ಸಲಹೆಗಾರರಾಗಿ ಮುಂಬಯಿ ಮಾತ್ರವಲ್ಲದೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಪರಿಚಿತರು. ಹಲವಾರು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನದಾಗಿರಿಸಿದವರು ಇವರು. ಮಹಾರಾಷ್ಟ್ರ ಸರಕಾರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ರಾಜಭವನದಲ್ಲಿ ಆರ್ ಕೆ ಶೆಟ್ಟಿಯವರನ್ನು ಗೌರವಿಸಿದ್ದಾರೆ. ಎಂ.ಡಿ.ಆರ್.ಟಿ ರಿಜಿಯನಲ್ ಚೇರ್ಮೆನ್ ಆಗಿ ನಿಯುಕ್ತಿ ಗೊಂಡ ಪ್ರಥಮ ಭಾರತೀಯ ಇವರು. ಎಂ.ಡಿ.ಆರ್.ಟಿ. ಯ ಹದಿನೇಳು ಸದಸ್ಯರ ತಂಡದ ಮ್ಯಾನೇಜ್ಮೆಂಟ್ ಕೌನ್ಸಿಲ್ ನ ಸದಸ್ಯರಾಗಿಯೂ ಕಾರ್ಯನಿರ್ವಹಣೆ. ಗ್ಲೋಬಲ್ ಇಂಡಿಯನ್ ಅಚೀವರ್ ಪ್ರಶಸ್ತಿ. ಸಮಾಜ ರತ್ನ, ಸಮಾಜ ಸೇವಾ ಧುರೀಣ, ಸರ್ವಕಾಲಿಕ ಉತ್ತೇಜಕ, ಹೀಗೆ ವಿವಿಧ ಸಂಘಟನೆಗಳಿಂದ ಅನೇಕ ಪ್ರಶಸ್ತಿ, ಪುರಸ್ಕಾರ, ಸನ್ಮಾನಗಳನ್ನು ಪಡೆದಿರುವರು. ಅರ್ಥಶಾಸ್ತ್ರದಲ್ಲಿ ಬಿ ಕಾಂ ಮತ್ತು ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ನಲ್ಲಿ ವಿಶೇಷ ಡಿಪ್ಲೋಮಾ ಪಡೆದಿದ್ದಾರೆ. ಅಮೆರಿಕಾದ ಇನ್ಸೂರೆನ್ಸ್ ಕಾಲೇಜಿನಿಂದ ಎಲ್.ಟಿ.ಯು.ಸಿ, ಎಲ್. ಎಲ್. ಬಿ ಹಾಗು ಎಂ. ಬಿ. ಎ. ಪದವಿ, ಶ್ರೀಲಂಕಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಇವರು ಎಂ.ಡಿ.ಆರ್.ಟಿ. ವಾರ್ಷಿಕ ಸಮಾವೇಶದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿ ತನ್ನ ರಾಷ್ಟ್ರ ಪ್ರೇಮವನ್ನು ಮೆರೆದಿದ್ದಾರೆ.
ತನ್ನ ಆರ್ಥಿಕ ಸಂಸ್ಥೆಯ ಮೂಲಕ ಬಂಟ ಸಮಾಜದ ಬಂಧುಗಳಿಗೆ ಮತ್ತು ವಿಶೇಷ ಆರ್ಥಿಕ ನೆರವು ನೀಡುವ ಯೋಜನೆಯೊಂದನ್ನು ರೂಪಿಸಿಕೊಂಡಿದ್ದಾರೆ. ಈಗಾಗಲೇ ಬಹಳಷ್ಟು ಬಂಟ ಸಮಾಜದ ಬಂಧುಗಳಿಗೆ ಲಕ್ಷಾಂತರ ರೂಪಾಯಿಯನ್ನು ನೀಡಿ ಅವರ ಸಂಕಷ್ಟಗಳಿಗೆ ದುಃಖಗಳಿಗೆ ಸ್ಪಂದನೆ ಮಾಡಿ ಎಲ್ಲರೂ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ. ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಉಪ ಕಾರ್ಯಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಟೈಂಮ್ಸ್ ಆಪ್ ಇಂಡಿಯಾ ಪತ್ರಿಕೆಯು ’ಲೀಡರ್ ಆಫ್ ಚೇಂಜ್’ಪ್ರಶಸ್ತಿ

ಡಾ.ಆರ್ ಕೆ ಶೆಟ್ಟಿ ‌ಇವರ ಸಾಧನೆಯನ್ನು ಗುರುತಿಸಿ ಕೆಲವು ದಿನಗಳ ಹಿಂದೆ ಟೈಂಮ್ಸ್ ಆಪ್ ಇಂಡಿಯಾ ಪತ್ರಿಕೆಯು ’ಲೀಡರ್ ಆಫ್ ಚೇಂಜ್’ ಆಗಿ ದೇಶದ 20 ಮಂದಿ ಸಾಧಕರನ್ನು ಆಯ್ಕೆ ಮಾಡಿದ್ದು ಇದರಲ್ಲಿ ತುಳು ಕನ್ನಡಿಗರಾದ ಡಾ. ಅರ್. ಕೆ. ಶೆಟ್ಟಿಯವರೂ ಒಬ್ಬರಾಗಿದ್ದಾರೆ. ಇವರ ಸಾಧನೆ ಬಗ್ಗೆ ಪತ್ರಿಕೆಯ ಲೀಡರ್ ಆಫ್ ಚೇಂಜ್ ವಿಭಾಗದಲ್ಲಿ ಲೇಕನ ಪ್ರಕಟವಾಗಿದೆ.

Related posts

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಮಲಾಡ್ ಕುರಾರ್ ಶನೇಶ್ವರ ಮಂದಿರದ ವತಿಯಿಂದ ಉಳ್ಳಾಳ ಸೋಮೇಶ್ವರದಲ್ಲಿ, ಶ್ರೀ ಶನಿ ಮಹಾಪೂಜೆ.

Mumbai News Desk