September 6, 2026
Mumbai News Kannada
ಸುದ್ದಿ

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು





ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಭಟ್ಯಾಡಿ ಸುಲಭ ಗೆಲುವು ಸಾಧಿಸಿದ್ದಾರೆ.


ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಒಟ್ಟು 5907 ಮತಗಳಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು 3655 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ರಾಜು ಪೂಜಾರಿ 1,958 ಮತಗಳನ್ನು ಪಡೆದರೆ ಎಸ್ ಡಿ ಪೈ ಅಭ್ಯರ್ಥಿ 195, ದಿನಕರ್ ಉಲ್ಲಾಳ್ 9 ಮತಗಳನ್ನು ಪಡೆದರೆ, 90 ಮತಗಳು ಅಮಾನ್ಯಗೊಂಡಿವೆ.


ಕೋಟ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು(ಅ. 24)ಚುನಾವಣೆ ಫಲಿತಾಂಶ ಹೊರ ಬಿದ್ದಿದೆ.
ಕಿಶೋರ್ ಬೊಟ್ಯಾಡಿ ಅವರ ಗೆಲುವಿಗೆ, ಅವರ ಆತ್ಮೀಯರಾಗಿರುವ, ಉದ್ಯಮಿ, ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ್ ಎನ್ ಬಂಗೇರ ಅಭಿನಂದನೆ ಸಲ್ಲಿಸಿದ್ದಾರೆ.

.



Related posts

ಅಂಬರ್‌ನಾಥ್‌ನ ಬಿಲ್ಡರ್ ಜಗದೀಶ್ ರಾಮ ಬಂಜನ್ ಅವರಿಗೆ ಲೋಕಮತ್ ಪ್ರಶಸ್ತಿ,

Mumbai News Desk

ಶೋಲೆ ಚಿತ್ರದ ಐಕಾನಿಕ್ ಜೈಲರ್ ಅಸ್ರಾನಿ ನಿಧನ

Mumbai News Desk

​ತಿರುವನಂತಪುರದಲ್ಲಿ ಜ್ಞಾನದೀಪ ‘ಗುರುದರ್ಶನ’ ಕೃತಿ ಬಿಡುಗಡೆ: ಗಡಿನಾಡಲ್ಲಿ ಕನ್ನಡ ಸಾಹಿತ್ಯದ ಬೆಳಕು!

Mumbai News Desk

ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕಾರ್ಕಳದ ಪ್ರತಿಭೆ ಸಿಂಚನ್ ಎ. ಪೂಜಾರಿ ಆಯ್ಕೆ: ಕರ್ನಾಟಕಕ್ಕೆ ಹೆಮ್ಮೆಯ ಗೌರವ

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ ” ಜಾನಪದ ರತ್ನ – 2026″ ಪ್ರಶಸ್ತಿ

Mumbai News Desk